Webdunia - Bharat's app for daily news and videos

Install App

ಬಿಎಸ್‌ವೈ ಏನ್ ಇನ್‌ಕಂ ಟ್ಯಾಕ್ಸ್‌ನವರ ಏಜೆಂಟಾ: ಸಿಎಂ ಸಿದ್ದರಾಮಯ್ಯ ಕಿಡಿ

Webdunia
ಶುಕ್ರವಾರ, 23 ಡಿಸೆಂಬರ್ 2016 (13:16 IST)
ಮೈಸೂರಿನ ನಂಜನಗೂಡು ಚುನಾವಣೆಯಲ್ಲಿ ಆದಾಯ ತೆರಿಗೆ ವಂಚಕ ಸುನೀಲ್ ಭೋಸ್ ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಎಸ್‌ವೈಇನ್‌ಕಂ ಟ್ಯಾಕ್ಸ್‌ನವರ ಏಜೆಂಟಾ ಎಂದು ಗುಡುಗಿದ್ದಾರೆ.
 
ಯಡಿಯೂರಪ್ಪನವರಿಗೆ ದಿವ್ಯ ಜ್ಞಾನ ಇದೆಯಾ? ಅವರ ಬಳಿ ಯಾರಾದರೂ ತೆರಿಗೆ ವಂಚಿಸಿದ್ದಾರೆ ಎನ್ನುವ ದಾಖಲೆಗಳಿದ್ದಲ್ಲಿ ಕೊಡಲಿ. ಅದನ್ನು ಬಿಟ್ಟು ಹಿಟ್ ಆಂಡ್ ರನ್ ಕೇಸ್ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
 
ನಂಜನಗೂಡು ಉಪಚುನಾವಣೆಯಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಭೋಸ್ ಸ್ಪರ್ಧಿಸಲ್ಲ ಎಂದು ಭವಿಷ್ಯ ನುಡಿದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಎಸ್‌ವೈಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. 
 
ದೇವೇಗೌಡರಿಗೆ ತಿರುಗೇಟು............
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ನಾನು ಸತ್ಯ ಹೇಳಿದ್ದೇನೆ. ಈ ಸತ್ಯ ಜೆಡಿಎಸ್ ನಾಯಕರಿಗೂ ಗೊತ್ತು. ಈ ಹಿಂದೆ ನಾವೇಲ್ಲ ಜೆಡಿಎಸ್ ಪಕ್ಷದಲ್ಲಿದ್ದಾಗಲೇ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ಇದೀಗ ಸ್ವಂತ ಬಲದ ಮೇಲೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆಯೇ ಎಂದು ಪ್ರಶ್ನಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments