Select Your Language

Notifications

webdunia
webdunia
webdunia
webdunia

BSY ನಮ್ಮ ನಾಯಕ : ಯತ್ನಾಳ್, ಕತ್ತಿ ಹೇಳಿಕೆ ವಯಕ್ತಿಕ

BSY ನಮ್ಮ ನಾಯಕ : ಯತ್ನಾಳ್, ಕತ್ತಿ ಹೇಳಿಕೆ ವಯಕ್ತಿಕ
ಬೆಂಗಳೂರು , ಸೋಮವಾರ, 1 ಜೂನ್ 2020 (17:46 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರು. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ.

ಬಿಜೆಪಿ ಭಿನ್ನಾಭಿಪ್ರಾಯವಿಲ್ಲ ಎಲ್ಲಾ ಸರಿ ಹೋಗಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು, ಪಕ್ಷದಲ್ಲಿ ಹಲವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಹೊರತು ಭಿನ್ನಾಭಿಪ್ರಾಯವಿಲ್ಲ. ಏನೇ ಇದ್ದರೂ ಎಲ್ಲವೂ ಸರಿ ಹೋಗಲಿದೆ ಎಂದಿದ್ದಾರೆ.

ಸಚಿವ ಸ್ಥಾನ ಆಕಾಂಕ್ಷಿ ಆಗಿರುವ ಉಮೇಶ್ ಕತ್ತಿ  ಅವರು ಉತ್ತರ ಕರ್ನಾಟಕದ ಕೆಲವು ಶಾಸಕರಿಗೆ ಊಟಕ್ಕೆ ಕರೆದಿದ್ದು ನಿಜ. ಸಹಜವಾಗಿ ರಾಜಕೀಯ ಚರ್ಚೆ ಆಗಿರುತ್ತೆ. ಆದರೆ ಅದು ಭಿನ್ನ ಮತಕ್ಕಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ವಯಕ್ತಿಕವಾದುದು.

ರಮೇಶ್ ಕತ್ತಿ  ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಿಂದ ಶ್ರಮಿಕ್ ರೈಲು : ಪ್ರತ್ಯೇಕ ಕ್ವಾರಂಟೈನ್