Webdunia - Bharat's app for daily news and videos

Install App

ಆಡಿಯೋದಲ್ಲಿ ಮಾತನಾಡಿದ್ದು ನಾನೇ ಎಂದ BSY

Webdunia
ಭಾನುವಾರ, 10 ಫೆಬ್ರವರಿ 2019 (14:24 IST)
ಆಪರೇಷನ್ ಕಮಲ ಕುರಿತು ಆಡಿಯೋದಲ್ಲಿ ಮಾತನಾಡಿದ್ದು ನಾನೇ ಎಂದು BSY ಒಪ್ಪಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಯದು ಥರ್ಡ್ ಕ್ಲಾಸ್ ರಾಜಕಾರಣ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೊನ್ನೆ ಬಿಡುಗಡೆ ಮಾಡಿದ್ದ ಆಡಿಯೋದಲ್ಲಿ ನಾನೇ ಮಾತನಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಥರ್ಡ್ ಕ್ಲಾಸ್​ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಸಿಎಂ, ಗುರಮಠಕಲ್ ಶಾಸಕರ ಮಗನನ್ನು ನನ್ನ ಹತ್ತಿರ ಕಳುಹಿಸಿಕೊಟ್ಟು, ಆಪರೇಷನ್ ಕಮಲ ಕುರಿತು ಮಾತನಾಡುವಂತೆ ಅದನ್ನು ರಿಕೆರ್ಡಿಂಗ್ ಮಾಡಿಕೊಂಡು ಆರೋಪ ಮಾಡುವ ಮೂಲಕ‌ ಆಡಿಯೋವನ್ನು ತಮಗೆ ಬೇಕಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತಿದ್ದಾರೆ‌ ಎಂದು ಆರೋಪಿಸಿದರು.

ನನ್ನ ಬಳಿ ಶಾಸಕರ ಮಗ ಶರಣಗೌಡ ಬಂದಿದ್ದು ನಿಜ. ಕುಮಾರಸ್ವಾಮಿ ಕುತಂತ್ರ ಮಾಡಿ, ನನ್ನ ಬಳಿ ಶರಣಗೌಡ ಅವರನ್ನು ಕಳಿಸಿಕೊಟ್ಟಿದ್ದಾರೆ. ಇದು ಒಬ್ಬ ಮುಖ್ಯಮಂತ್ರಿ ಹುದ್ದೆಯಲ್ಲಿದ್ದುಕೊಂಡು ಮಾಡುವದು ಸರಿಯಲ್ಲ.
ಆಡಿಯೋದಲ್ಲಿರುವ ಕೆಲ‌ಸತ್ಯಗಳನ್ನು ಅವರು ಮರೆ ಮಾಚಿದ್ದಾರೆ ಎಂದರು.

ಇತ್ತೀಚೆಗೆ ಸ್ವತಃ ಪ್ರಜ್ವಲ್ ರೇವಣ್ಣ ಅವರೇ ನಮ್ಮದು ಸೂಟ್ ಕೇಸ್ ಸಂಸ್ಕೃತಿ. ಸೂಟ್ ಕೇಸ್ ಇಲ್ಲದೇ ಯಾವುದೇ ಕೆಲಸ ಆಗಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ನನ್ನ ಬಳಿಯೂ ದಾಖಲೆಗಳು ಇವೆ.  ಸೋಮವಾರ ಅವರ ಬಂಡವಾಳ ಬಯಲು ಮಾಡುವೆ ಎಂದು ಬಿ.ಎಸ್​ ಯಡಿಯೂರಪ್ಪ  ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments