ಬಿಎಸ್‌ವೈ, ಸವದಿಗೆ ಮಾನ ಮರ್ಯಾದೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯ

Webdunia
ಶುಕ್ರವಾರ, 30 ಜೂನ್ 2017 (16:13 IST)
ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿರುವ ಯಡಿಯೂರಪ್ಪ, ಸದನದಲ್ಲಿ ಬ್ಲ್ಯೂಫಿಲ್ಮ್ ನೋಡಿದ ಅಥಣಿ ಶಾಸಕ ಲಕ್ಷ್ಮಣ್ ಸವದಿಗೆ ಮಾನ ಮರ್ಯಾದೆ ಇದ್ರೆ ರಾಜಕೀಯ ನಿವೃತ್ತಿ ಘೋಷಿಸಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಆಯೋಜಿಸಲಾದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋದ ಯಡಿಯೂರಪ್ಪ, ಬ್ಲ್ಯೂಫಿಲ್ಮ್ ನೋಡಿದ ಶಾಸಕ ಲಕ್ಷ್ಮಣ್ ಸವದಿಯಂತಹ ನಾಯಕರಿರುವ ಬಿಜೆಪಿಯನ್ನು ದೂರವಿಡಿ ಎಂದು ಕರೆ ನೀಡಿದರು.
 
ಚೆಕ್ ಮೂಲಕ ಭ್ರಷ್ಟಾಚಾರದ ಹಣ ಪಡೆದವರಲ್ಲಿ ದೇಶದಲ್ಲಿಯೇ ಯಡಿಯೂರಪ್ಪ ಮೊದಲನೇ ಸ್ಥಾನ ಪಡೆದಿದ್ದಾರೆ ಎಂದು ಲೇವಡಿ ಮಾಡಿದರು. 
 
ಬಿಜೆಪಿ ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುತ್ತಿದೆ. ಕೋಮುವಾದವೇ ಬಿಜೆಪಿಯ ಮುಖ್ಯ ತಿರುಳಾಗಿದೆ. ಸಮಾಜಗಳಲ್ಲಿ ಒಡಕು ಉಂಟು ಮಾಡಿ ಅದರ ಲಾಭ ಪಡೆಯುವುದೇ ಬಿಜೆಪಿ ನಾಯಕರ ಕಾಯಕವಾಗಿದೆ ಎಂದು ತಿರುಗೇಟು ನೀಡಿದರು.  
 
ಪ್ರಧಾನಿ ಮೋದಿ ವಿರುದ್ಧವು ವಾಗ್ದಾಳಿ ನಡೆಸಿದ ಸಿಎಂ,  3 ವರ್ಷದಲ್ಲಿ 6 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಹೇಳಿದ್ದರು ಆದರೆ, ಕೇವಲ 4 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಿದ್ದಾರೆ. ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ತಮ್ಮದು ಎಂದು ಮೋದಿ ಸರಕಾರ ಹೇಳುತ್ತಿರುವುದಾಗಿ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments