ಯಡಿಯೂರಪ್ಪ ಮನೆಯಲ್ಲಿ ದಲಿತ ಕುಟುಂಬಗಳಿಗೆ ಔತಣಕೂಟ

Webdunia
ಸೋಮವಾರ, 28 ಆಗಸ್ಟ್ 2017 (15:51 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ದಲಿತ ಕುಟುಂಬದವರಿಗೆ ವಿಶೇಷ ಭೋಜನಕೂಟ ಏರ್ಪಡಿಸಿದ್ದರು.



ಬಿಜೆಪಿಯ ಜನ ಸಂಪರ್ಕ ಅಭಿಯಾನದ ಸಂದರ್ಭದಲ್ಲಿ ತಮಗೆ ಆತಿಥ್ಯ ನೀಡಿದ್ದ 33 ದಲಿತ ಕುಟುಂಬಗಳನ್ನ ಆಹ್ವಾನಿಸಿದ್ದ ಬಿಎಸ್ ವೈ, ಎಲ್ಲರನ್ನೂ ಪ್ರೀತಿಯಿಂದ ಸ್ವಾಗತಿಸಿದರು. ಹೋಳಿಗೆ ಊಟದೊಂದಿಗೆ ಔತಣಕೂಟದಲ್ಲಿ 18 ಬಗೆಯ ಸಾಂಪ್ರದಾಯಿಕ ಖಾದ್ಯ ಬಡಿಸಲಾಯಿತು. ಖುದ್ದು ಬಿಎಸ್ ವೈ ಊಟ ಬಡಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ಆಗಮಿಸಿದ್ದ ಚಿತ್ರದುರ್ಗ ಮಾದಾರ ಚೆನ್ನಯ್ಯ ಸ್ವಾಮೀಜಿ ಕುಳಿತು ತಾವು ಅಲ್ಲಿಯೇ ಊಟ ಮಾಡಿದರು.



ಇದೇ ಸಂದರ್ಭದಲ್ಲಿ ಮಾತನಾಡಿದ ಬಿಎಸ್ ವೈ, ಇದು ತಮ್ಮ ಜೀವನದಲ್ಲಿ ಎಂದೂ ಮರೆಯಲಾಗದ ಅತ್ಯಂತ ಶುಭ ದಿವಸ ಎಂದು ಬಣ್ಣಿಸಿದ್ದಾರೆ. ತಾವು ದಲಿತರ ಕಾಲೋನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸ್ಥಿತಿಗತಿಯನ್ನು ಕಣ್ಣಾರೆ ಕಂಡಿದ್ದು, ಅವರ ಸಮಸ್ಯೆಗಳ ನಿವಾರಣೆಗೆ ತಮ್ಮ ಜೀವನವನ್ನೇ ಮುಡುಪಾಗಿಡುವುದಾಗಿ ಹೇಳಿದರು. ತಾವು ಅಧಿಕಾರದಲ್ಲಿದ್ದಾಗ ಜಾತಿ, ಕುಲ ಎಂದು ಭೇದ ಭಾವ ಮಾಡದೆ ಎಲ್ಲರ ಅಭಿವೃದ್ಧಿಗಾಗಿ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದನ್ನು ಸ್ಮರಿಸಿದರು. ತಮ್ಮ ದಲಿತ ಕಾಲೋನಿ ಭೇಟಿ ಸಂದರ್ಭದಲ್ಲಿ ಯಾವ ಬೆದರಿಕೆಗೂ ಜಗ್ಗದೆ ತಮಗೆ ಆತಿಥ್ಯ ನೀಡಿದ ದಲಿತರನ್ನು ತಮ್ಮ ಕೊನೆಯ ಉಸಿರಿನವರೆಗೂ ಮರೆಯುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಸಿ.ಎಂ.ಉದಾಸಿ, ಗೋವಿಂದ ಕಾರಜೋಳ ಸೇರಿದಂತೆ ಹಲವು ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಇದೇವೇಳೆ ಮೊದಲ ಬಾರಿ ಭೇಟಿ ನೀಡಿದ ಅನೇಕ ದಲಿತ ಕುಟುಂಬಗಳಿಗೆ ಬೆಂಗಳೂರಿನಲ್ಲಿರುವ ಪ್ರೇಕ್ಷಣೀಯ ಸ್ಥಳಗಳ ದರ್ಶನ ಮಾಡಿಸುವ ವ್ಯವಸ್ಥೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments