ಬಿಎಸ್ವೈ ರಾಜೀನಾಮೆ: ಯಾವುದೇ ಪದಗಳು ನ್ಯಾಯ ಒದಗಿಸುವುದಿಲ್ಲ ಎಂದ ಮೋದಿ!

Webdunia
ಬುಧವಾರ, 28 ಜುಲೈ 2021 (14:13 IST)
ನವದೆಹಲಿ(ಜು.28): ಬಿಎಸ್ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಸಿಎ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ಕಳೆದ ಕೆಲ ಸಮಯದಿಂದ ನಡೆದು ಬಂದಿದ್ದ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

* ಬಿಎಸ್ವೈ ರಾಜೀನಾಮೆ, ಬೊಮ್ಮಾಯಿ ನೂತನ ಸಿಎಂ
* ಬಿಎಸ್ವೈ ರಾಜೀನಾಮೆ ಬೆನ್ನಲ್ಲೇ ಪಿಎಂ ಮೋದಿ ಟ್ವೀಟ್
* ಯಾವುದೇ ಪದಗಳಿಂದ ಅವರ ಕೊಡುಗೆ ವರ್ಣಿಸಲು ಸಾಧ್ಯವಿಲ್ಲ

ಇನ್ನು ಬಿಎಸ್ವೈ ರಾಜೀನಾಮೆಯಿಂದ ಅವರ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದರೂ, ಅವರ 'ಮಾನಸ ಪುತ್ರ' ಎಂದೇ ಕರೆಸಿಕೊಳ್ಳುವ ಬೊಮ್ಮಾಯಿ ನೂತನ ಸಿಎಂ ಆಗಿರುವುದು ಅವರನ್ನು ಕೊಂಚ ಸಮಾಧಾನಗೊಳಿಸಿದೆ. ಅಲ್ಲದೇ ಬಿಎಸ್ವೈ ಓಲೈಕೆ ಜೊತೆಗೆ ಲಿಂಗಾಯತರನ್ನು ಸಮಾಧಾನಪಡಿಸಲು ಬಿಜೆಪಿಗೆ ಬೊಮ್ಮಾಯಿಯನ್ನಿ ಸಿಎಂ ಆಗಿ ಆಯ್ಕೆ ಮಾಡುವುದು ಅನಿವಾರ್ಯವಾಗಿತ್ತು. ಅದರಂತೆ ಸದ್ಯ ಸಿಎಂ ಆಯ್ಕೆ ಕಗ್ಗಂಟು ಯಾವುದೇ ಸಮಸ್ಯೆ ಇಲ್ಲದೇ ಇತ್ಯರ್ಥವಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕ ಬಿಜೆಪಿಯ ಭೀಷ್ಮ ಎನಿಸಿಕೊಂಡಿರುವ ಬಬಿ. ಎಸ್. ಯಡಿಯೂರಪ್ಪ ಪದ್ತ್ಯಾಗ ಹಾಗೂ ಕರ್ನಾಟಕದ ಪರ ಅವರ ಕೊಡುಗೆ ಬಗ್ಗೆ ಟ್ವೀಟ್ ಮಾಡಿದ್ದಾರೆ. ನಮ್ಮ ಪಕ್ಷ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಶ್ರೀ ಬಿ. ಎಸ್. ಯಡಿಯೂರಪ್ಪನವರ ಅಪರಿಮಿತ ಕೊಡುಗೆಯ ಬಗ್ಗೆ ಯಾವುದೇ ಪದಗಳಿಂದ ಮೆಚ್ಚುಗೆ ವ್ಯಕ್ತಪಡಿಸಲು ಸಾಧ್ಯವಿಲ್ಲ. ಇದ್ಯಾವುದೂ ಸೂಕ್ತ ನ್ಯಾಯ ಒದಗಿಸಲು ಸಾಧ್ಯವಿಲ್ಲ. ದಶಕಗಳ ಕಾಲ ಅವರು ಕಷ್ಟಪಟ್ಟು ದುಡಿದು, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರನ್ನು ಒಗ್ಗೂಡಿಸಿದ್ದಾರೆ. ಸಾಮಾಜಿಕ ಕಲ್ಯಾಣಕ್ಕಾಗಿ ಅವರ ಬದ್ಧತೆ ಅತೀವ ಮೆಚ್ಚುಗೆ ಗಳಿಸಿದ್ದಾರೆ ಎಂದಿರುವ ಪಿಎಂ ಮೋದಿ, ರಾಜ್ಯ ಹಾಗೂ ಪಕ್ಷದ ಪರ ಅವರ ಶ್ರಮಕ್ಕೆ ಸಲಾಂ ಎಂದಿದ್ದಾರೆ.
ಇನ್ನು ಬೊಮ್ಮಾಯಿ ಸಿಎಂ ಆದ ಬಳಿಕ ಯಡಿಯೂರಪ್ಪ ಮುಂದಿನ ನಡೆ ಏನು ಎಂಬ ಕುತೂಹಲ ಎಲ್ಲರಲ್ಲೂ ಸಹಜವಾಗೇ ಕಾಡಿದೆ. ಆದರೆ ಇವೆಲ್ಲಕ್ಕೂ ಉತ್ತರಿಸಿರುವ ಬಿಎಸ್ವೈ ತಾನು ಇನ್ಮುಂದೆಯೂ ಪಕ್ಷದ ಏಳಿಕೆಗಾಗಿ ಶ್ರಮ ವಹಿಸುತ್ತೇನೆ. ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತೇನೆ ಎನ್ನುವ ಮೂಲಕ ರಾಜ್ಯಪಾಲರ ಸ್ಥಾನ ಒಪ್ಪಿಕೊಳ್ಳುವುದನ್ನು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments