Webdunia - Bharat's app for daily news and videos

Install App

ಬಿಎಸ್ ವೈ, ಕಂದಾಯ ಸಚಿವರ 'ಲಾಂಗ್ ಟರ್ಮ್ ಗೆಸ್ಟ್' !

Webdunia
ಸೋಮವಾರ, 6 ಸೆಪ್ಟಂಬರ್ 2021 (11:04 IST)
ಬೆಂಗಳೂರು : ಮುಖ್ಯಮಂತ್ರಿ ಹುದ್ದೆ ತೊರೆದು ತಿಂಗಳು ಕಳೆದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾವೇರಿ ವಾಸ್ತವ್ಯ ತೊರೆದಿಲ್ಲ.ಸರ್ಕಾರಿ ನಿವಾಸ ಕಾವೇರಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹಂಚಿಕೆ ಮಾಡಲಾಗಿದೆ. ಆದರೆ ಸದ್ಯಕ್ಕೆ ಯಡಿಯೂರಪ್ಪ ಅವರಿಗೆ ಕಾವೇರಿ ನಿವಾಸದಿಂದ ವಾಸ್ತವ್ಯ ಬದಲಾಯಿಸುವ ಮೂಡ್ ಇಲ್ಲವಂತೆ. 2023ರ ವಿಧಾನಸಭೆ ಚುನಾವಣೆವರೆಗೂ ಕಾವೇರಿಯಲ್ಲಿಯೇ ಬೀಡು ಬಿಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹಂಚಿಕೆ ಮಾಡಿರುವ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಲಾಂಗ್ ಟರ್ಮ್ ಗೆಸ್ಟ್ ಆಗಿ ಉಳಿಯಲಿದ್ದಾರೆ. ಅಶೋಕ್ ಸದ್ಯ ತಮ್ಮ ಖಾಸಗಿ ನಿವಾಸದಲ್ಲಿ ಉಳಿದುಕೊಂಡಿದ್ದಾರೆ.
ಲಾಂಗ್ ಟರ್ಮ್ ಗೆಸ್ಟ್ ಸಂಸ್ಕೃತಿ ಕರ್ನಾಟಕ ರಾಜಕೀಯಕ್ಕೆ ಹೊಸತಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಂಡಾಗ ಸಿದ್ದರಾಮಯ್ಯ 2018 ರಲ್ಲಿ ಇದೇ ವಿಧಾನವನ್ನು ಮುಂದುವರಿಸಿದ್ದರು. ತಮಗೆ ಅಧಿಕಾರ ಇಲ್ಲದಿದ್ದರೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಕೆಜೆ ಜಾರ್ಜ್ ಅವರಿಗೆ ನೀಡಿದ್ದ ಕಾವೇರಿ ನಿವಾಸದಲ್ಲಿಯೇ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದರು.
ಸಮ್ಮಿಶ್ರ ಸರ್ಕಾರದ 14 ತಿಂಗಳ ಅವಧಿ ಪೂರ್ಣವಾಗುವವರೆಗೂ ಸಿದ್ದರಾಮಯ್ಯ ಕಾವೇರಿಯಲ್ಲಿಯೇ ಇದ್ದರು. 2019 ರಲ್ಲಿ ಮೈತ್ರಿ ಸರ್ಕಾರ ಪತನವಾದಾಗ ಶೇಷಾದ್ರಿಪುರಂ ನಲ್ಲಿರುವ ವಿರೋಧ ಪಕ್ಷದ ನಾಯಕರ ನಿವಾಸಕ್ಕೆ ತೆರಳಿದರು. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಸ್ವಂತ ಮನೆ ಧವಳಗಿರಿಯಿಂದ 2020 ರಲ್ಲಿ ಕಾವೇರಿಯನ್ನು ರಿನೋವೇಷನ್ ಮಾಡಿಸಿ ಶಿಫ್ಟ್ ಆಗಿದ್ದರು, ಗುಂಡೂರಾವ್ ಕೂಡ ಅಧಿಕಾರ ಕಳೆದುಕೊಂಡ ಆರು ತಿಂಗಳ ನಂತರವೂ ತಮ್ಮ ಅಧಿಕೃತ ಸರ್ಕಾರಿ ನಿವಾಸದಲ್ಲಿ ವಾಸವಿದ್ದರು.
ರಾಮಕೃಷ್ಣ ಹೆಗ್ಡೆಯಂತ ಕೆಲವರು. ಮುಖ್ಯಮಂತ್ರಿಯಾದ ನಂತರವೂ ತಮ್ಮ ಸ್ವಂತ ನಿವಾಸದಿಂದ ಕಾರ್ಯ ನಿರ್ವಹಿಸಿದರು. ಯಡಿಯೂರಪ್ಪ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ಬಸವರಾಜ ಬೊಮ್ಮಾಯಿ ನೀಡಿದ್ದರು ಆದರೆ, ಯಡಿಯೂರಪ್ಪ ಆಫರ್ ನಿರಾಕರಿಸಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments