Webdunia - Bharat's app for daily news and videos

Install App

ಬಿಎಸ್ವೈ ಕನಸಿನ ಯೋಜನೆ, ವಿಧಾನಸೌಧದಲ್ಲಿ ಬಸವೇಶ್ವರ ಪ್ರತಿಮೆ ಅನುಮತಿ!

Webdunia
ಶುಕ್ರವಾರ, 16 ಜುಲೈ 2021 (15:00 IST)
ಬೆಂಗಳೂರು(ಜು.16): ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ವಿಧಾನಸೌಧಕ್ಕೆ ಕೂಗಳತೆ ದೂರದಲ್ಲಿ ಬಸವೇಶ್ವರರ ಅಶ್ವಾರೂಢ ಪ್ರತಿಮೆ ಇರುವುದರಿಂದ ವಚನ ಬರೆಯುವ ಭಂಗಿ ಸೇರಿ ಇತರ ಭಂಗಿಗಳಲ್ಲಿನ ಪ್ರತಿಮೆ ಸ್ಥಾಪಿಸುವ ಬಗ್ಗೆ ಚಿಂತನೆ ನಡೆದಿದೆ.
* ವಿಧಾನಸೌಧದಲ್ಲಿ ಬಸವೇಶ್ವರ ಪ್ರತಿಮೆಗೆ ಸಂಪುಟ ಅನುಮತಿ
* ವಚನ ಬರೆವ ಭಂಗಿಯಲ್ಲಿ ನಿರ್ಮಾಣಕ್ಕೆ ಚಿಂತನೆ
* ಬಿಎಸ್ವೈ ಕನಸಿನ ಯೋಜನೆಗೆ ಹಾದಿ ಸುಗಮ

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ, ವಿಧಾನಸೌಧದ ಆವರಣದಲ್ಲಿ ಬಸವೇಶ್ವರರ ಪ್ರತಿಮೆಯನ್ನು ಸ್ಥಾಪಿಸುವ ಕುರಿತಂತೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಚ್ಚದ ಬಗ್ಗೆ ತೀರ್ಮಾನಿಸಲಿದೆ. ಅಶ್ವಾರೂಢ ಬಸವೇಶ್ವರ ಪ್ರತಿಮೆ ಬದಲು ವಚನ ಬರೆಯುವ ಭಂಗಿ ಸೇರಿ ಇತರ ಭಂಗಿಗಳಲ್ಲಿನ ಪ್ರತಿಮೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂದಿನ ದಿನದಲ್ಲಿ ಈ ಬಗ್ಗೆ ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದರು.
ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದಿಢೀರನೆ ವಿಧಾನಸೌಧದ ಆವರಣದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪಿಸುವ ನಿರ್ಧಾರ ಕೈಗೊಂಡು ಈ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸಿ ಕಳುಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಿದ್ದರು. ಅದರ ಬೆನ್ನಲ್ಲೇ ಕಳೆದ ವಾರ ವಿಧಾನಸೌಧದ ಆವರಣದಲ್ಲಿ ಖುದ್ದಾಗಿ ಸ್ಥಳ ಪರಿಶೀಲನೆಯನ್ನೂ ನಡೆಸಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments