Webdunia - Bharat's app for daily news and videos

Install App

ಅಧಿಕಾರ ಸಿಗಲಿ, ಬಿಡಲಿ ವಿರೋಧ ಪಕ್ಷದಲ್ಲಿರಲಿ, ಆಡಳಿತದಲ್ಲಿರಲಿ ಜನರಿಗಾಗಿಯೇ ಪ್ರಾಣ ಕೊಡುತ್ತೇನೆ - ಬಿಎಸ್ ಯಡಿಯೂರಪ್ಪ

Webdunia
ಶನಿವಾರ, 19 ಮೇ 2018 (17:23 IST)
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಇಂದು ವಿಶ್ವಾಸಮತ ಯಾಚನೆಗೆ ಮುನ್ನವೇ ಸುದೀರ್ಘ ಭಾಷಣ ಮಾಡಿ ‘40 ಸ್ಥಾನಗಳಲ್ಲಿದ್ದ ನಮ್ಮ ಪಕ್ಷವನ್ನು ಜನ 104 ಸ್ಥಾನಗಳಿಗೆ ಏರಿಕೆ ಮಾಡಿದ್ದಾರೆ. ಜನಾದೇಶ ನಮ್ಮ ಪರವಾಗಿತ್ತು. ಆದರೆ ಜನತಂತ್ರ ವ್ಯವಸ್ಥೆಯಲ್ಲಿ ನಮಗೆ ಬಹುಮತದ ಕೊರತೆಯಾಗಿತ್ತು. ಇದನ್ನು ನಾವು ಒಪ್ಪುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.


ಇದೇ ವೇಳೆ ಮಾತನಾಡಿದ ಅವರು,’ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಮುಂದಿನ ನನ್ನ ಜೀವನದ ಕೊನೆ ಉಸಿರುವವರೆಗೂ ಈ ರಾಜ್ಯದ ರೈತರ ದೀನದಲಿತರ ಪರವಾಗಿ ಹೋರಾಟ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ನಾಲ್ಕೂವರೆ ವರ್ಷದಲ್ಲಿ ಅದ್ಭುತವಾದ ಆಡಳಿತ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅವರಿಗೆ ಕೊಡುಗೆ ನೀಡುತ್ತೇವೆ ಎಂದು ಹೇಳಿದರು. ವಿಶ್ವಾಸ ಮತ ಯಾಚಿಸದೆ ಜನತಾ ನ್ಯಾಯಾಲಯದ ಮುಂದೆ ಹೋಗಲು ತೀರ್ಮಾನಿಸಿದ್ದೇನೆ. ಜನತಾ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ನಮಗಿದೆ. ಕಾಂಗ್ರೆಸ್‍ನವರ ಕುತಂತ್ರ ರಾಜಕಾರಣದಿಂದ ನಮಗೆ ಹಿನ್ನಡೆಯಾಗಿದೆ. ಅಧಿಕಾರ ಸಿಗಲಿ, ಬಿಡಲಿ ವಿರೋಧ ಪಕ್ಷದಲ್ಲಿರಲಿ, ಆಡಳಿತದಲ್ಲಿರಲಿ ಜನರಿಗಾಗಿಯೇ ಪ್ರಾಣ ಕೊಡುತ್ತೇನೆ. ನಾನು ಹೋರಾಟದಿಂದ ಬಂದವನು, ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments