ಅಧಿಕಾರ ಸಿಗಲಿ, ಬಿಡಲಿ ವಿರೋಧ ಪಕ್ಷದಲ್ಲಿರಲಿ, ಆಡಳಿತದಲ್ಲಿರಲಿ ಜನರಿಗಾಗಿಯೇ ಪ್ರಾಣ ಕೊಡುತ್ತೇನೆ - ಬಿಎಸ್ ಯಡಿಯೂರಪ್ಪ

Webdunia
ಶನಿವಾರ, 19 ಮೇ 2018 (17:23 IST)
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಸದನದಲ್ಲಿ ಇಂದು ವಿಶ್ವಾಸಮತ ಯಾಚನೆಗೆ ಮುನ್ನವೇ ಸುದೀರ್ಘ ಭಾಷಣ ಮಾಡಿ ‘40 ಸ್ಥಾನಗಳಲ್ಲಿದ್ದ ನಮ್ಮ ಪಕ್ಷವನ್ನು ಜನ 104 ಸ್ಥಾನಗಳಿಗೆ ಏರಿಕೆ ಮಾಡಿದ್ದಾರೆ. ಜನಾದೇಶ ನಮ್ಮ ಪರವಾಗಿತ್ತು. ಆದರೆ ಜನತಂತ್ರ ವ್ಯವಸ್ಥೆಯಲ್ಲಿ ನಮಗೆ ಬಹುಮತದ ಕೊರತೆಯಾಗಿತ್ತು. ಇದನ್ನು ನಾವು ಒಪ್ಪುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.


ಇದೇ ವೇಳೆ ಮಾತನಾಡಿದ ಅವರು,’ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಮುಂದಿನ ನನ್ನ ಜೀವನದ ಕೊನೆ ಉಸಿರುವವರೆಗೂ ಈ ರಾಜ್ಯದ ರೈತರ ದೀನದಲಿತರ ಪರವಾಗಿ ಹೋರಾಟ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ನಾಲ್ಕೂವರೆ ವರ್ಷದಲ್ಲಿ ಅದ್ಭುತವಾದ ಆಡಳಿತ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅವರಿಗೆ ಕೊಡುಗೆ ನೀಡುತ್ತೇವೆ ಎಂದು ಹೇಳಿದರು. ವಿಶ್ವಾಸ ಮತ ಯಾಚಿಸದೆ ಜನತಾ ನ್ಯಾಯಾಲಯದ ಮುಂದೆ ಹೋಗಲು ತೀರ್ಮಾನಿಸಿದ್ದೇನೆ. ಜನತಾ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ನಮಗಿದೆ. ಕಾಂಗ್ರೆಸ್‍ನವರ ಕುತಂತ್ರ ರಾಜಕಾರಣದಿಂದ ನಮಗೆ ಹಿನ್ನಡೆಯಾಗಿದೆ. ಅಧಿಕಾರ ಸಿಗಲಿ, ಬಿಡಲಿ ವಿರೋಧ ಪಕ್ಷದಲ್ಲಿರಲಿ, ಆಡಳಿತದಲ್ಲಿರಲಿ ಜನರಿಗಾಗಿಯೇ ಪ್ರಾಣ ಕೊಡುತ್ತೇನೆ. ನಾನು ಹೋರಾಟದಿಂದ ಬಂದವನು, ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments