ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದ ಬಜೆಟ್: ಬಿ.ಎಸ್.ಯಡಿಯೂರಪ್ಪ

Webdunia
ಮಂಗಳವಾರ, 1 ಫೆಬ್ರವರಿ 2022 (21:15 IST)
ಬೆಂಗಳೂರು: 'ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2022-23ನೇ ಸಾಲಿನ ಆಯವ್ಯಯವು ಕೋವಿಡ್-19 ರಿಂದ ಉಂಟಾದ ಆರ್ಥಿಕ ಹಿಂಜರಿತವನ್ನು ಸರಿಪಡಿಸುವ ದೃಷ್ಟಿಯಲ್ಲಿ ಹಾಗೂ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೆಳಿದ್ದಾರೆ. 
ಗ್ರಾಮೀಣ ಹಾಗೂ ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿದೆ. ಡಿಜಿಟಲೀಕರಣ ಮತ್ತು ಸ್ವಾವಲಂಬನೆಗೆ ಒತ್ತು ನೀಡಿದ್ದು, ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ. 
ಪ್ರತಿ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ಒದಗಿಸುವುದು, ನಗರ ಪ್ರದೇಶದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ ಬ್ಯಾಟರಿ ಸ್ವಾಪಿಂಗ್ ಕೇಂದ್ರ ಸ್ಥಾಪನೆ ಉದ್ದೇಶಿಸಿರುವುದು ಸ್ವಾಗತರ್ಹ ವಿಷಯ ಎಂದರು. 
ದೇಶದ ಪ್ರಮುಖ ನದಿಗಳ ಜೋಡಣೆ, ಪ್ರತಿ ಮನೆಗಳಿಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಒದಗಿಸುವುದು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಒತ್ತು ನೀಡಿ, 2023 ರ ವರ್ಷವನ್ನು “ಅಂತರಾಷ್ಟ್ರೀಯ ಸಿರಿಧಾನ್ಯ” ವರ್ಷವೆಂದು ಘೋಷಣೆ ಮಾಡಿದ್ದು ಒಟ್ಟಾರೆಯಾಗಿ ಜನಪರವಾದ ಆಯವ್ಯಯ ಮಂಡಿಸಿರುವ ವಿತ್ತ ಸಚಿವರನ್ನು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ಬಿ.ಎಸ್ ಯಡಿಯೂರಪ್ಪ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments