Publish Date: Fri, 17 Feb 2023 (09:36 IST)
Updated Date: Fri, 17 Feb 2023 (10:19 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಶುಕ್ರವಾರ ಬಜೆಟ್ ಮಂಡಿಸಲಿದೆ.
ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿದ್ದಾರೆ. ಅಲ್ಲದೇ ಸರ್ಕಾರವನ್ನು ಬ್ಯಾಡ್ ಎಂದು ಕರೆದಿದ್ದಾರೆ.
ಪಕ್ಷಾಂತರ ಹಾಗೂ ಭ್ರಷ್ಟಾಚಾರದಿಂದ ರಚನೆಯಾದ ಬಿಜೆಪಿಯ ಅನೈತಿಕ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಶಾಪವಾಗಿದೆ. ಭ್ರಷ್ಟಾಸುರ ಬೊಮ್ಮಾಯಿ ಅವರ ಸರ್ಕಾರದ ಅವಧಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ಸರ್ಕಾರ.
ಸುಳ್ಳು ಭರವಸೆ ಮೂಲಕ ರಾಜ್ಯದ ಜನರ ಕನಸನ್ನು ನುಚ್ಚುನೂರು ಮಾಡಿದೆ. ಜತೆಗೆ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದೆ. ಈ ಲಂಪಟ ಹಾಗೂ ಭ್ರಷ್ಟಚಾರ ದರೂಪವಾಗಿರುವ ಸರ್ಕಾರದಲ್ಲಿ ಬೊಮ್ಮಾಯಿ ಅವರು #Pಚಿಥಿಅಒ ಹಾಗೂ ಅವರ ಸರ್ಕಾರ #40% ಸರ್ಕಾರ ಎಂಬ ಖ್ಯಾತಿ ಪಡೆದಿದೆ. ಈ ಸರ್ಕಾರ ರಾಜ್ಯದ 6.50 ಕೋಟಿ ಜನರ ಈ ಆರು ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.