Select Your Language

Notifications

webdunia
webdunia
webdunia
webdunia

ಯೇಸು ಪ್ರತಿಮೆ ನಿರ್ಮಾಣ ವಿಚಾರ; ವರದಿ ನೀಡುವ ಮುನ್ನವೇ ಕನಕಪುರ ತಹಶೀಲ್ದಾರ್ ವರ್ಗಾವಣೆ

ರಾಮನಗರ
ರಾಮನಗರ , ಮಂಗಳವಾರ, 31 ಡಿಸೆಂಬರ್ 2019 (10:51 IST)
ರಾಮನಗರ : ಯೇಸು ಪ್ರತಿಮೆ ನಿರ್ಮಾಣದ ಬಗ್ಗೆ ಸರ್ಕಾರಕ್ಕೆ ವರದಿ ನೀಡುವ ಮುನ್ನವೇ ಡಿಕೆಶಿ ಆಪ್ತ ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ರಾಜ್ಯ ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿದೆ.



ಕನಕಪುರದ ಹಾರೋಬೆಲೆ ಸಮೀಪದ ಕಪಾಲಿ ಬೆಟ್ಟದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಶಾಸಕ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ  ಕಂದಾಯ ಸಚಿವರು ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ರಾಮನಗರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು.


ಆದರೆ ತನಿಖೆಗೆ ಆದೇಶಿಸಿದ ಮೂರೇ ದಿನಕ್ಕೆ ಇದೀಗ ಕನಕಪುರ ತಹಶೀಲ್ದಾರ್ ಆನಂದಯ್ಯ ಅವರನ್ನು ವರ್ಗಾವಣೆ ಮಾಡಿದ್ದು, ಭಾರೀ ಚರ್ಚೆಗೆ, ಅನುಮಾನಕ್ಕೆ ಕಾರಣವಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷದ ಶುಭಾಶಯ ಕೋರಲು ನಾಳೆ ಸಿಎಂ ಭೇಟಿಯಾಗಲಿರುವ ಬಿಜೆಪಿಯ 12 ನೂತನ ಶಾಸಕರು