Webdunia - Bharat's app for daily news and videos

Install App

ಬಿಲ್ಡಿಂಗ್ ಕುಸಿಯುವ ಭೀತಿ: ಮನೆತೊರೆದ ನೆರೆಹೊರೆಯವರು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (14:04 IST)
ನಾಲ್ಕು ಅಂತಸ್ತಿನ ಬಿಲ್ಡಿಂಗ್ ಕುಸಿಯುವ ಭೀತಿ ಎದುರಾಗಿದೆ. ಈ ಕುರಿತು ಯಾರ ಬಳಿ ದೂರು ನೀಡಿದರು ಪ್ರಯೋಜನ ಆಗಿಲ್ಲ. ಹೀಗಾಗಿ ಅಕ್ಕಪಕ್ಕದ ಮನೆಯ ನಿವಾಸಿಗಳು ಜೀವಭಯದಿಂದ ತಮ್ಮ ಮನೆಗಳನ್ನೇ ಖಾಲಿ ಮಾಡಿರುವ ಘಟನೆ ನಡೆದಿದೆ.

ಒಬ್ಬ  ಪ್ರಭಾವಿ ವ್ಯಕ್ತಿ ಅಕ್ರಮವಾಗಿ ನಾಲ್ಕು ಅಂತಸ್ತಿನ ಬಿಲ್ಡಿಂಗ್ ನಿರ್ಮಾಣ ಮಾಡುತ್ತಿದ್ದು, ಆ ಬಿಲ್ಡಿಂಗ್‌ ನಿರ್ಮಾಣ ಹಂತದಲ್ಲೇ ಕುಸಿಯುವ ಭೀತಿಯಲ್ಲಿದೆ. ಹೀಗಾಗಿ ಅಕ್ಕ ಪಕ್ಕದ ಮನೆಯವರು ಪ್ರತಿನಿತ್ಯ ಭಯದಿಂದ ಜೀವನ ನಡೆಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಆನೇಕಲ್ ಹೊರವಲಯದ ಬನ್ನೇರುಘಟ್ಟ ಸಮೀಪದ ಹುಳ್ಳಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗೊಟ್ಟಿಗೆರೆಯ ಸಾಜಾರಾಮ್ ಎಂಬಾ ಪ್ರಭಾವಿ ವ್ಯಕ್ತಿ ಗ್ರಾಮ ಪಂಚಾಯತಿಯಲ್ಲಿ ಯಾರ  ಅನುಮತಿ ಪಡೆಯದೆ  ನಾಲ್ಕು ಅಂತಸ್ತಿನ ಬಿಲ್ಡಿಂಗ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಆ ಕಟ್ಟಡ  ನಿರ್ಮಾಣ ಹಂತದಲ್ಲೇ ಕುಸಿಯುವ ಭೀತಿಯಲ್ಲಿದೆ. ಅಲ್ಲಿನ ಅಕ್ಕ ಪಕ್ಕದ ಮನೆಯವರು  ಭಯದ ವಾತವರಣದಲ್ಲಿ ಪ್ರತಿನಿತ್ಯ ಜೀವನ ನಡೆಸುತ್ತಿದ್ದಾರೆ. ಬಿಲ್ಡಿಂಗ್ ಈಗಾಗಲೇ  ವಾಲಿಕೊಂಡಿದ್ದು ಇದರಿಂದ ಪಕ್ಕದ ಮನೆಗೆ ಬಹಳಷ್ಟು ಹಾನಿಯಾಗಿದೆ. ಮನೆಯ ಸಂಪೂರ್ಣ ಭಾಗದಷ್ಟು ಬಿರುಕು ಬಿಟ್ಟು ಕುಸಿಯುವ ಭೀತಿಯಲ್ಲಿದೆ. ಜೀವಭಯದಲ್ಲಿ ಅಕ್ಕಪಕ್ಕದ ಮನೆಯವರು ಜೀವನ ನಡೆಸುತ್ತಿದ್ದಾರೆ. ಇನ್ನು  ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡ ಕುಟುಂಬದವರು ಯಾವ ಅಧಿಕಾರಿಯ  ಬಳಿಯೂ ಹೇಳಿಕೊಂಡರು ಸಹ ಪ್ರಯೋಜನವಾಗಿಲ್ಲ. 

ಬೀಳುವ ಪರಿಸ್ಥಿತಿಯಲ್ಲಿರುವ  ಮನೆಯಲ್ಲಿ ಸಣ್ಣ ಪುಟ್ಟ ಮಕ್ಕಳಿದ್ದು ರಾತ್ರಿ ನಿದ್ರೆ ಇಲ್ಲದೆ ಜೀವನ ನಡೆಸುತ್ತಿದ್ದಾರೆ. ಅನಿವಾರ್ಯವಾಗಿ ಮನೆಯನ್ನು ಖಾಲಿ ಮಾಡಿಕೊಂಡು ಬೇರೆಡೆ ಬಾಡಿಗೆ ಮನೆಗೆ ಹೋಗುತ್ತಿದ್ದಾರೆ. ಬಹುತೇಕ ಅಕ್ಕ ಪಕ್ಕದ ಮನೆಯವರು ತಮ್ಮ ಮನೆಗಳನ್ನು ಖಾಲಿ ಮಾಡಿಕೊಂಡು ಬೇರೆಡೆ ಹೋಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಮೃತ ಕುಟುಂಬದವರಿಗೆ ನಷ್ಟ ಭರಿಸಲಂತೂ ನಮ್ಮಿಂದಾಗಲ್ಲ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಸರ್ಕಾರದ ಕೈವಾಡ: ಪ್ರಹ್ಲಾದ್ ಜೋಶಿ ಗರಂ

ಹಾಸನ ದುರಂತಕ್ಕೆ ಕೋಮುಬಣ್ಣ ಹಚ್ಚಿದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ವಾರ್ನಿಂಗ್‌

ಜಾತಿಗಣತಿಗೆ 425 ಕೋಟಿ ರೂ ಖರ್ಚು, ಉಪಯೋಗವಾದ್ರೆ ಸಾಕು: ಬಿವೈ ವಿಜಯೇಂದ್ರ

2 ವರ್ಷಗಳ ಬಳಿಕ ಮಣಿಪುರಕ್ಕೆ ಮೋದಿ: ಪ್ರಿಯಾಂಕಾ ಗಾಂಧಿಯಿಂದ ಟೀಕೆ

ಮುಂದಿನ ಸುದ್ದಿ
Show comments