ಸಿಲಿಕಾನ್ ಸಿಟಿಯಲ್ಲಿ ಪುಂಡರ ವ್ಹೀಲಿಂಗ್ ಹಾವಳಿ

Webdunia
ಬುಧವಾರ, 4 ಜನವರಿ 2023 (18:28 IST)
ಸಿಲಿಕಾನ್ ಸಿಟಿಯಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಮಿತಿ ಮೀರುತ್ತಿದ್ದು, ತಮ್ಮ ಸಾಹಸವನ್ನು ಸೋಶಿಯಲ್‌ ಮೀಡಿಯಾದಲ್ಲೂ ಭರ್ಜರಿಯಾಗಿ ಅಪ್‌ಲೋಡ್‌ ಮಾಡುತ್ತಿದ್ದಾರೆ. ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಇವರ ಹಾವಳಿ ಹೆಚ್ಚುತ್ತಿದೆ.ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕಸಿಕ್ಕ ರೋಡ್‌ಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಚಟ ಹಲವು ಯುವಕರಲ್ಲಿ ಕಂಡುಬರುತ್ತಿದೆ. ರಿಂಗ್ ರೋಡ್, ಹೈವೇ, ಸಿಟಿ ಸೆಂಟರ್ ರೋಡ್‌ಗಳಲ್ಲಿ ಭಯಾನಕ ವ್ಹೀಲಿಂಗ್ ಕಂಡುಬರುತ್ತಿದೆ. ಡ್ರ್ಯಾಗ್ ರೇಸ್, ವ್ಹೀಲಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎನ್ನುವ ಪೊಲೀಸರಿಗೆ ಇದು ಕಾಣಿಸುತ್ತಿಲ್ಲ. ಹೊಸ ವರ್ಷಾಚರಣೆ ವೇಳೆ ಟ್ರಾಫಿಕ್ ಪೊಲೀಸ್ ಎಚ್ಚರಿಕೆ ನಡುವೆಯೂ ಪುಂಡರ ವ್ಹೀಲಿಂಗ್ ನಿಂತಿರಲಿಲ್ಲ.
 
ಏರ್ಪೋರ್ಟ್ ರೋಡ್, ತುಮಕೂರು ರೋಡ್, ನಾಗವಾರ ರಿಂಗ್ ರೋಡ್ ಹಾಗೂ ಸಿಟಿ ಒಳಗಿನ ಕೆಲ ರಸ್ತೆಗಳಲ್ಲಿ ಇವರದ್ದೇ ಹಾವಳಿ. ಇತರೆ ವಾಹನ ಸವಾರರು ಇವರ ವ್ಹೀಲಿಂಗ್‌ನಿಂದ ಭಯ ಬೀಳುತ್ತಿದ್ದಾರೆ. ಯಾವಾಗ ಇದರಿಂದಾಗಿ ಅಪಘಾತ ಸಂಭವಿಸುತ್ತದೋ ತಿಳಿಯದು. ಇವರು ಅಮಾಯಕರ ಪ್ರಾಣಕ್ಕೆ ಎರವಾಗುವ ಮುನ್ನವೇ ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ.‌
 
ತಾವು ಮಾಡುವ ವ್ಹೀಲಿಂಗ್ ದೃಶ್ಯಗಳನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡುವ ಚಟವನ್ನೂ ಹಲವರು ಹೊಂದಿದ್ದಾರೆ. ವ್ಹೀಲಿಂಗ್ ದೃಶ್ಯಗಳಿಗೆ ಸಾಂಗ್ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. satish_.tj66 , shaktivel, me_shaffu , cl_me_navaz_34_kimg, nabiellnm, waseem_46, ll_fearless_kimg_ll, d_e_v_i_l_46 ಎಂಬಿತ್ಯಾದಿ ಇನ್‌ಸ್ಟಾ ಐಡಿಗಳ ಮೂಲಕ ಇವು ಅಪ್‌ಲೋಡ್ ಆಗುತ್ತಿವೆ. ಈ ವಿಡಿಯೋಗಳನ್ನು ನೋಡಿದರೆ ಬೆಚ್ಚಿ ಬೀಳುವಂತಿವೆ. ಕೆಲವರು ಕೈಯಲ್ಲಿ ಡ್ಯಾಗರ್‌, ಲಾಂಗ್‌ ಇತ್ಯಾದಿಗಳನ್ನು ಹಿಡಿದುಕೊಂಡು ಪೋಸ್‌ ಕೊಡುತ್ತಾ ವ್ಹೀಲಿಂಗ್‌ ಮಾಡುತ್ತಿದ್ದಾರೆ. ಇದು ಇನ್ನಷ್ಟು ಮಂದಿಗೆ ಇಂಥ ಕೃತ್ಯ ಕೈಗೊಳ್ಳಲು ಪ್ರೇರೇಪಿಸುವಂತಿದೆ.ಇನ್ನೂ ಇ ಬಗ್ಗೆ ಮಾತನಾಡಿದ ಟ್ರಾಫಿಕ್ ಡಿಸಿಪಿ‌ ಅನುಚೇತ್  ಇಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಯಾರೇ ನಾಯಕರಾಗಲಿ, ಕೊಲ್ಲೋದು ಖಚಿತ: ಡೊನಾಲ್ಡ್ ಟ್ರಂಪ್ ವಾರ್ನಿಂಗ್

Karnataka Weather: ಇಂದಿನ ಬಿಸಿಲಿನ ಝಳ ಹೆಚ್ಚಳ, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮುಂದಿನ ಸುದ್ದಿ
Show comments