Webdunia - Bharat's app for daily news and videos

Install App

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಬಂಪರ್ – ಏನಿದು ಯೋಜನೆ?

Webdunia
ಗುರುವಾರ, 2 ಫೆಬ್ರವರಿ 2023 (09:25 IST)
ಬೆಂಗಳೂರು : ಕರ್ನಾಟಕದ ಭದ್ರಾ ಮೇಲ್ಡಂಡೆ ಯೋಜನೆಗೆ ಕೇಂದ್ರದ ಬಜೆಟ್ನಲ್ಲಿ ಬಂಪರ್ ಕೊಡುಗೆ ಸಿಕ್ಕಿದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದರ ಜೊತೆಗೆ 5,300 ಕೋಟಿಯನ್ನು ಬಂಪರ್ ಗಿಫ್ಟ್ ಕೊಟ್ಟಿದೆ ಮೋದಿ ಸರ್ಕಾರ.

ಭದ್ರಾ ಮೇಲ್ಡಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳ ಜನರಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಬಹುದಾಗಿದೆ.

ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯೂ ಇದರ ವ್ಯಾಪ್ತಿಯಲ್ಲಿ ಬರಲಿದೆ. ಅಂದಹಾಗೆ 29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ನೀಡಲಾಗಿದೆ.

 
ಯೋಜನೆ ಬ್ಲೂ ಪ್ರಿಂಟ್ ಏನು?

ತುಂಗಾ ನದಿಯಿಂದ 17.40 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದು. ಭದ್ರಾ ಜಲಾಶಯಕ್ಕೆ ನೀರು ಹರಿಸುವುದು, ಭದ್ರಾ ಜಲಾಶಯದಿಂದ 29.90 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದಾಗಿದೆ. ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯುವುದು ಮತ್ತು ಅಜ್ಜಂಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ ಯೋಜನೆ ಆಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments