Webdunia - Bharat's app for daily news and videos

Install App

ಬಂಪರ್ ಟೊಮೊಟೊ ಬೆಳೆದ ಕಾನ್ಸ್‌ಟೆಬಲ್

Webdunia
ಭಾನುವಾರ, 16 ಜುಲೈ 2023 (16:41 IST)
ಚಿನ್ನದ ಬೆಲೆ ಎನಿಸಿಕೊಂಡಿರೋ ಟೊಮೆಟೊವನ್ನು ಭರ್ಜರಿಯಾಗಿ ಬೆಳೆದು ಪೊಲೀಸ್ ಕಾನ್‌ಸ್ಟೇಬಲ್​​​​​​ ಒಬ್ಬರು ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ. ಬೇಲೂರು ತಾಲೂಕಿನ ಹಳೆಬೀಡು ಹೋಬಳಿ ಬಸ್ತಿಹಳ್ಳಿ ಗ್ರಾಮದ ಬೈರೇಶ್​ ಟೊಮೆಟೊ ಬೆಳೆ ಬೆಳೆದಿದ್ದಾರೆ.. ಬೈರೇಶ್ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿದ್ದಾರೆ. ಇವರು ಒಂದು ಎಕರೆ 6 ಗುಂಟೆ ಜಾಗದಲ್ಲಿ ಟೊಮೆಟೊ ಬೆಳೆದಿದ್ದು, ಈಗಾಗಲೇ 20 ಲಕ್ಷ ರೂ. ಆದಾಯ ಗಳಿಸಿದ್ದಾರೆ. ಬೈರೇಶ್ ಇತ್ತೀಚೆಗೆ ಸಾವಿರ ಬಾಕ್ಸ್ ಟೊಮೆಟೊ ಮಾರಾಟ ಮಾಡಿದ್ದಾರೆ. ಇನ್ನೂ ಸಾವಿರ ಬಾಕ್ಸ್ ಹಣ್ಣಿನ ನಿರೀಕ್ಷೆಯಲ್ಲಿದ್ದಾರೆ.. ಟೊಮೆಟೊ ಬೆಲೆ ಏರಿಕೆ ಹಿನ್ನೆಲೆ ಅಲ್ಲಲ್ಲಿ ಟೊಮೆಟೊ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಅದೇ ರೀತಿ ಪೊಲೀಸ್ ಪೇದೆ ಬೈರೇಶ್ ತೋಟಕ್ಕೂ ಕಳ್ಳರ ಕಾಟ ತಪ್ಪಿಲ್ಲ.. ಕಳ್ಳರು ಈಗಾಗಲೇ ಬೈರೇಶ್ ಹೊಲದಿಂದ ನೂರಾರು ಬಾಕ್ಸ್ ಟೊಮೆಟೊ ಕಳ್ಳತನ ಮಾಡಿದ್ದಾರೆ. ನಂತರ ಎಚ್ಚೆತ್ತುಕೊಂಡ ಅವರು ರಾತ್ರಿಯಿಡೀ ಹೊಲದಲ್ಲಿ ಕಾವಲು ಕಾದು ಟೊಮೆಟೊಗಳನ್ನು ಉಳಿಸಿಕೊಂಡಿದ್ದಾರೆ.. ಉಡುಪಿ, ಮಂಗಳೂರಿನಿಂದ ವರ್ತಕರು ಆಗಮಿಸಿ ಬೈರೇಶ್ ಹೊಲದಿಂದ ಟೊಮೆಟೊ ಖರೀದಿ ಮಾಡುತ್ತಾರೆ. ಮಳೆ ಕೊರತೆ, ರೋಗ ಬಾಧೆ, ಕಳ್ಳರ ಕಾಟದ ನಡುವೆಯೂ ಟೊಮೆಟೊ ಬೆಳೆದು ಭರ್ಜರಿ ಆದಾಯ ಗಳಿಸಿರುವ ಬೈರೇಶ್ ಇತರರಿಗೂ ಮಾದರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments