Webdunia - Bharat's app for daily news and videos

Install App

ಸುಟ್ಟು ಕರಕಲಾದ ಬಸ್: ಮೂವರು ಸಾವು

Webdunia
ಮಂಗಳವಾರ, 12 ಫೆಬ್ರವರಿ 2019 (19:07 IST)
ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಹೊತ್ತಿ ಉರಿದು, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಎಂಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಗೆ ಬೆಂಕಿ ಹೊತ್ತಿ ಉರಿದ ದಾರುಣ ಘಟನೆ ಬೆಂಗಳೂರು ನಗರ ಹೊರವಲಯದ ದೇವಗೆರೆ ಬಳಿ ನಡೆದಿದೆ.

ಹಾರೋಹಳ್ಳಿಯ ಬಸವರಾಜ್ ಮಡಿವಾಳದ ಪ್ರದೀಪ್ ಹಾಗೂ ಅವಿನಾಶ್ ಮೃತ ದುರ್ದೈವಿಗಳು. ಕಗ್ಗಲೀಪುರ ಹಾಗೂ ಕುಂಬಳಗೂಡು ಮಾರ್ಗ ಮಧ್ಯದ ದೇವಗೆರೆ ಸಮೀಪದಲ್ಲಿ ಅಪಘಾತ ನಡೆದಿದ್ದು, ಬಸ್ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸವರಾಜ್, ಪ್ರದೀಪ್ ಹಾಗೂ ಅವಿನಾಶ್ ಪಲ್ಸರ್ ಬೈಕ್ನಲ್ಲಿ ಕಗ್ಗಲೀಪುರದಿಂದ ಕುಂಬಳಗೂಡು ವೇಗವಾಗಿ ಹೋಗುತ್ತಾ ಮುಂದಿದ್ದ ಲಾರಿಯನ್ನು ಹಿಂದಿಕ್ಕಲು ಮುಂದಾದಾಗ ಎದುರಿನಿಂದ ಕುಂಬಳಗೂಡು ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ ಬಸ್ ಎಂಜಿನ್ಗೂ ಬೆಂಕಿ ತಗುಲಿ ಸವಾರರು ಮಾರುದ್ದ ಹಾರಿಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments