ಸುಟ್ಟು ಕರಕಲಾದ ಬಸ್: ಮೂವರು ಸಾವು

Webdunia
ಮಂಗಳವಾರ, 12 ಫೆಬ್ರವರಿ 2019 (19:07 IST)
ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಹೊತ್ತಿ ಉರಿದು, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಎಂಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಗೆ ಬೆಂಕಿ ಹೊತ್ತಿ ಉರಿದ ದಾರುಣ ಘಟನೆ ಬೆಂಗಳೂರು ನಗರ ಹೊರವಲಯದ ದೇವಗೆರೆ ಬಳಿ ನಡೆದಿದೆ.

ಹಾರೋಹಳ್ಳಿಯ ಬಸವರಾಜ್ ಮಡಿವಾಳದ ಪ್ರದೀಪ್ ಹಾಗೂ ಅವಿನಾಶ್ ಮೃತ ದುರ್ದೈವಿಗಳು. ಕಗ್ಗಲೀಪುರ ಹಾಗೂ ಕುಂಬಳಗೂಡು ಮಾರ್ಗ ಮಧ್ಯದ ದೇವಗೆರೆ ಸಮೀಪದಲ್ಲಿ ಅಪಘಾತ ನಡೆದಿದ್ದು, ಬಸ್ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸವರಾಜ್, ಪ್ರದೀಪ್ ಹಾಗೂ ಅವಿನಾಶ್ ಪಲ್ಸರ್ ಬೈಕ್ನಲ್ಲಿ ಕಗ್ಗಲೀಪುರದಿಂದ ಕುಂಬಳಗೂಡು ವೇಗವಾಗಿ ಹೋಗುತ್ತಾ ಮುಂದಿದ್ದ ಲಾರಿಯನ್ನು ಹಿಂದಿಕ್ಕಲು ಮುಂದಾದಾಗ ಎದುರಿನಿಂದ ಕುಂಬಳಗೂಡು ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ ಬಸ್ ಎಂಜಿನ್ಗೂ ಬೆಂಕಿ ತಗುಲಿ ಸವಾರರು ಮಾರುದ್ದ ಹಾರಿಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ನಡೆಸುತ್ತಿರುವ ತೆರಿಗೆ ಸುಲಿಗೆ ಬಯಲಾಗಿದೆ: ರಣದೀಪ್ ಸುರ್ಜೇವಾಲ

ಪಶ್ಚಿಮ ಬಂಗಾಳದ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರತೀಂದ್ರ ಬೋಸ್ ಆಯ್ಕೆ

ಮುಸ್ಲಿಂ ಮಗುವಿಗೆ ಅನ್ನಪ್ರಾಶನ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ Video

ಮೋದಿ ವಿದೇಶ ಪ್ರವಾಸದಿಂದ ಏನು ಲಾಭ: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments