Select Your Language

Notifications

webdunia
webdunia
webdunia
webdunia

ಗದ್ದೆಗೆ ಉರುಳಿದ ಬಸ್: ತಪ್ಪಿದ ಭಾರಿ ದುರಂತ

ಗದ್ದೆಗೆ ಉರುಳಿದ ಬಸ್: ತಪ್ಪಿದ ಭಾರಿ ದುರಂತ
ಶಿವಮೊಗ್ಗ , ಭಾನುವಾರ, 1 ಮೇ 2016 (13:32 IST)
ರಸ್ತೆಯೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದು 15 ಜನರು ಗಾಯಗೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಗಿನ ಜಾವ 3 ಗಂಟೆಗೆ ನಡೆದಿದೆ. ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.  
 
ಖಾಸಗಿ ಬಸ್ ಬಳ್ಳಾರಿಯಿಂದ ಮಂಗಳೂರು ಕಡೆಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದ್ದು ಪುರಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ. 
 
ರಸ್ತೆಯ ಇನ್ನೊಂದು ಬದಿಯಲ್ಲಿ ಕೆರೆ ಕೂಡ ಇದ್ದು ಒಂದು ವೇಳೆ ಬಸ್ ಆ ಕಡೆ ಉರುಳಿದ್ದರೆ ಭಾರಿ ದುರಂತ ಸಂಭವಿಸುತಿತ್ತು ಎಂದು ಗ್ರಾಮಸ್ಥರು ಆತಂಕ ವ್ಯಕ್ತ ಪಡಿಸಿದ್ದಾರೆ. 
 
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ಬಹಿರಂಗವಾಯ್ತು ಪ್ರಧಾನಿ ಮೋದಿ ವಿದ್ಯಾರ್ಹತೆ