Webdunia - Bharat's app for daily news and videos

Install App

ಬಸ್‌ ಅಪಘಾತ: 15 ಮಂದಿಗೆ ಗಾಯ

Webdunia
ಬುಧವಾರ, 25 ಜನವರಿ 2023 (18:44 IST)
ಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಖಾಸಗಿ ಪ್ರವಾಸಿ ಬಸ್ ಉರುಳಿ ಬಿದ್ದು15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಜೆ ಬರುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಗಿದೆ. ಗುಜರಾತ್‌ನಿಂದ ಆಗಮಿಸಿದ್ದ ಪ್ರವಾಸಿ ಬಸ್‌ ಇಂದು ಬೆಳಗ್ಗೆ ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಬರುತ್ತಿತ್ತು. ಈ ವೇಳೆ ಬಸ್‌ ಅನ್ನು ತಿರುವಿನಲ್ಲಿ ತಿರುಗಿಸುವಾಗ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಗುಂಡಿಗೆ ಬಿದ್ದು, ನಂತರ ಬೆಟ್ಟದತ್ತ ನುಗ್ಗಿದೆ. ಈ ವೇಳೆ ಬಸ್‌ ವಾಲಿಕೊಂಡು ಬಿದ್ದಿದ್ದು, ಬಸ್‌ನಲ್ಲಿದ್ದ 15 ಮಂದಿಗೆ ಗಾಯಗಳಾಗಿವೆ. ಇನ್ನು ಬಸ್‌ನಲ್ಲಿ ಸುಮಾರು 50 ಪ್ರವಾಸಿಗರು ಪ್ರಯಾಣ ಮಾಡುತ್ತಿದ್ದರು. ಪಾಲಾರ್ ರಸ್ತೆಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ. ಗಾಯಾಳುಗಳಿಗೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments