Webdunia - Bharat's app for daily news and videos

Install App

ಚಾಲಕನಿಗೆ ಹೃದಯಾಘಾತ: ಮನೆಗೆ ನುಗ್ಗಿದ ಬಸ್

Webdunia
ಬುಧವಾರ, 1 ಮಾರ್ಚ್ 2017 (07:38 IST)
ಚಾಲಕ ಹೃದಯಾಘಾತಕ್ಕೊಳಗಾದರಿಂದ ಆತನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಅಂಗಡಿ, ಮನೆಗೆ ನುಗ್ಗಿದ ಘಟನೆ ಮಂಗಳವಾರ ತೀರ್ಥಹಳ್ಳಿಯ ಗುಡ್ಡೇಕೇರಿಯಲ್ಲಿ ನಡೆದಿದೆ. 
 
ಬಸ್ ಮಂಗಳೂರಿನಿಂದ ಶಿವಮೊಗ್ಗ ಕಡೆ ಚಲಿಸುತ್ತಿತ್ತು. ಹೃದಯಾಘಾತಕ್ಕೊಳಗಾದ ಚಾಲಕ  ಶ್ರೀಕಂಠ (50) ಸ್ಥಳದಲ್ಲೇ ಮೃತಪಟ್ಟಿದ್ದು, ಇವರು ತಾಲ್ಲೂಕಿನ ಕಟ್ಟೆಹಕ್ಕಲು ಸಮೀಪ ಕೂಳೂರು ಗ್ರಾಮದ ನಿವಾಸಿಯಾಗಿದ್ದರು.ಅಪಘಾತದಿಂದ ಬಸ್‌ನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಜೆ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 
20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ.
 
ಆಗುಂಬೆ ಸಮೀಪವಿದ್ದಾಗ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿತ್ತು. ಅಲ್ಲಿಂದ 30ಕೀಲೋಮೀಟರ್ ದೂರದಲ್ಲಿರುವ ತೀರ್ಥಹಳ್ಳಿಯಲ್ಲಿ ಚಿಕಿತ್ಸೆ ಪಡೆಯುವುದೆಂದು ತೀರ್ಮಾನಿಸಿ ಪ್ರಯಾಣವನ್ನು ಮುಂದುವರೆಸಲಾಗಿತ್ತು. ಆದರೆ ಸ್ವಲ್ಪ ದೂರ ಪ್ರಯಾಣಿಸುವಷ್ಟರಲ್ಲಿ ಅವರು ಹೃದಯಾಘಾತಕ್ಕೊಳಗಾಗಿದ್ದಾರೆ.
 
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರುತ್ತಾ, ಹವಾಮಾನ ವರದಿ ನೋಡಿ

India Pakistan war: ಕರಾಚಿ ಬಂದರು ಪುಡಿಗಟ್ಟಿದ ಐಎನ್ಎಸ್ ವಿಕ್ರಾಂತ್ ವಿಡಿಯೋ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments