Webdunia - Bharat's app for daily news and videos

Install App

ಚಾಲಕನಿಗೆ ಹೃದಯಾಘಾತ: ಮನೆಗೆ ನುಗ್ಗಿದ ಬಸ್

Webdunia
ಬುಧವಾರ, 1 ಮಾರ್ಚ್ 2017 (07:38 IST)
ಚಾಲಕ ಹೃದಯಾಘಾತಕ್ಕೊಳಗಾದರಿಂದ ಆತನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಅಂಗಡಿ, ಮನೆಗೆ ನುಗ್ಗಿದ ಘಟನೆ ಮಂಗಳವಾರ ತೀರ್ಥಹಳ್ಳಿಯ ಗುಡ್ಡೇಕೇರಿಯಲ್ಲಿ ನಡೆದಿದೆ. 
 
ಬಸ್ ಮಂಗಳೂರಿನಿಂದ ಶಿವಮೊಗ್ಗ ಕಡೆ ಚಲಿಸುತ್ತಿತ್ತು. ಹೃದಯಾಘಾತಕ್ಕೊಳಗಾದ ಚಾಲಕ  ಶ್ರೀಕಂಠ (50) ಸ್ಥಳದಲ್ಲೇ ಮೃತಪಟ್ಟಿದ್ದು, ಇವರು ತಾಲ್ಲೂಕಿನ ಕಟ್ಟೆಹಕ್ಕಲು ಸಮೀಪ ಕೂಳೂರು ಗ್ರಾಮದ ನಿವಾಸಿಯಾಗಿದ್ದರು.ಅಪಘಾತದಿಂದ ಬಸ್‌ನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಜೆ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
 
20 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ.
 
ಆಗುಂಬೆ ಸಮೀಪವಿದ್ದಾಗ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿತ್ತು. ಅಲ್ಲಿಂದ 30ಕೀಲೋಮೀಟರ್ ದೂರದಲ್ಲಿರುವ ತೀರ್ಥಹಳ್ಳಿಯಲ್ಲಿ ಚಿಕಿತ್ಸೆ ಪಡೆಯುವುದೆಂದು ತೀರ್ಮಾನಿಸಿ ಪ್ರಯಾಣವನ್ನು ಮುಂದುವರೆಸಲಾಗಿತ್ತು. ಆದರೆ ಸ್ವಲ್ಪ ದೂರ ಪ್ರಯಾಣಿಸುವಷ್ಟರಲ್ಲಿ ಅವರು ಹೃದಯಾಘಾತಕ್ಕೊಳಗಾಗಿದ್ದಾರೆ.
 
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments