Publish Date: Tue, 11 Jul 2023 (16:29 IST)
Updated Date: Tue, 11 Jul 2023 (16:35 IST)
ಎಣ್ಣೆ ಮತ್ತಿನಲ್ಲಿ ಕಾರಿನಲ್ಲಿದ್ದ ಯುವಕರು ಪುಂಡಾಟವೆಸಗಿ KSRTC ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಹೋರಿತಿಮ್ಮನಹಳ್ಳಿಯಲ್ಲಿ ನಡೆದಿದೆ. ಕಿಡಿಗೇಡಿಗಳು ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ ಮೇಲೆ ಬಾಟಲಿ ಎಸೆದು ಬಸ್ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ.. ಇದನ್ನು ಪ್ರಶ್ನೆ ಮಾಡಿದ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಸತೀಶ್ ಹಲ್ಲೆಗೊಳಗಾಗಿದ್ದಾರೆ.. ಹಲ್ಲೆಗೊಳಗಾದ ಡ್ರೈವರ್ ಸತೀಶ್ ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿರಣ್, ಸತೀಶ್, ಸಚಿನ್, ಸುಪ್ರೀತ್ರನ್ನು ಬಂಧಿಸಿದ್ದಾರೆ.