Webdunia - Bharat's app for daily news and videos

Install App

ಗ್ಯಾರಂಟಿ ಬರಾಟೆ, ಡೀಸೆಲ್ ಗೆ ದುಡ್ಡಿಲ್ಲ ಎಂದು ಬಸ್ ಗಳ ಸಂಖ್ಯೆ ಕಡಿತವಾಗಿದೆಯೇ: ಬಿಜೆಪಿ

Krishnaveni K
ಬುಧವಾರ, 20 ನವೆಂಬರ್ 2024 (15:09 IST)
ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಫಲವಾಗಿ ಬಸ್ ಗಳಿಗೆ ಡೀಸೆಲ್ ಹಾಕಲೂ ದುಡ್ಡಿಲ್ಲದೇ ಹಲವು ಬಸ್ ಕಡಿತ ಮಾಡಲಾಗಿದೆಯೇ ಎಂದು ರಾಜ್ಯ ಬಿಜೆಪಿ ಪ್ರಶ್ನೆ ಮಾಡಿದೆ.

ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡುತ್ತಿದೆ. ಅದರಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯೂ ಒಂದು. ಉಚಿತ ಕೊಟ್ಟರೂ ಸಾರಿಗೆ ಇಲಾಖೆ ಲಾಭದಲ್ಲೇ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳುತ್ತಲೇ ಇದ್ದಾರೆ. ಆದರೆ ಇತ್ತೀಚೆಗೆ ಹಲವು ಕಡೆ ಬಸ್ ಗಳ ಸಂಖ್ಯೆ ಕಡಿಮೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರಿನಲ್ಲಿ ಬಸ್ ಕಡಿತಗೊಳಿಸಿದ್ದಕ್ಕೆ ಸಾರ್ವಜನಿಕರು ಬಸ್ ಚಾಲಕ, ನಿರ್ವಾಹಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ ದಿನನಿತ್ಯ ಓಡಾಡಲೂ ಬಸ್ ಇಲ್ಲದ ಪರಿಸ್ಥಿತಿಯಾಗಿದೆ. ಡೀಸೆಲ್ ಗೆ ದುಡ್ಡಿಲ್ಲದೇ ಬಸ್ ಗಳನ್ನು ಕಡಿತ ಮಾಡಲಾಗಿದೆ ಎಂದು ಟೀಕಿಸಿದೆ.

ರಾಜ್ಯಾದ್ಯಂತ ವಿದ್ಯಾರ್ಥಿಗಳು, ಸಾರ್ವನಿಕರು ಪ್ರಯಾಣಿಸಲು ಕೆಎಸ್ ಆರ್ ಟಿಸಿ ಬಸ್ಸುಗಳು ಇಲ್ಲವೆಂದು ದಿನನಿತ್ಯ ಗೋಳಾಡುತ್ತಿದ್ದಾರೆ. ಸಚಿವ ರಾಮಲಿಂಗಾರೆಡ್ಡಿವಯರೇ ಸಾರಿಗೆ ಸಂಸ್ಥೆ ಲಾಭದಲ್ಲಿ ಇದೆ ಎಂದ ಮೇಲೆ ರೂಟ್ ಮೇಲೆ ಕಡಿಮೆ ಬಸ್ ಗಳು ಏಕೆ ಓಡಾಡುತ್ತಿವೆ? ಡಿಪೋದಲ್ಲಿ ನಿಂತಿರುವ ಬಸ್ಸುಗಳಿಗೆ ಡೀಸೆಲ್ ಹಾಕಲು ಸರ್ಕಾರದ ಬಳಿ ದುಡ್ಡಿಲ್ಲವೇ? ಎಂದು ಬಿಜೆಪಿ ಲೇವಡಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments