Webdunia - Bharat's app for daily news and videos

Install App

ಸೋರುತ್ತಿರೋ ಬಸ್ : ಹಿಗ್ಗಾಮುಗ್ಗಾ ಉಗಿಯುತ್ತಿರೋ ಪ್ರಯಾಣಿಕರು

Webdunia
ಗುರುವಾರ, 10 ಅಕ್ಟೋಬರ್ 2019 (13:00 IST)
ಸಾರಿಗೆ ಇಲಾಖೆಯ ಬಸ್ ಮಳೆ ನೀರಿಗೆ ಸೋರುತ್ತಿದ್ದು, ಅವುಗಳಲ್ಲೇ ಪ್ರಯಾಣಿಸುತ್ತಿರುವ ಜನರು ಕ್ಯಾಕರಿಸಿ ಉಗಿಯುತ್ತಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಮತ್ತೆ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಜನರು ಮಳೆಗೆ ತತ್ತರಿಸಿ ಹೋಗಿದ್ದಾರೆ.

ಈ ಬಾರಿ ಮನೆ, ಮಠಗಳು ಅಷ್ಟೇ ಅಲ್ಲದೇ ಸಾರಿಗೆಯ ಬಸ್ಸು ಕೂಡಾ ಸೋರಲು ಆರಂಭಿಸಿದೆ. ಜನರು ಸಾರಿಗೆ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹುಬ್ಬಳ್ಳಿಯಿಂದ ಗುಡೇನಕಟ್ಟಿ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್ಸು ಮಳೆಯಿಂದ ಸೋರುತ್ತಿದ್ದು, ಮೊದಲೇ ಅರ್ಧದಷ್ಟು ಹಾಳಾದ ಬಸ್ಸು ಇದೀಗ ಮಳೆಯಿಂದಾಗಿ ಎಲ್ಲೆಂದರಲ್ಲಿ ಸೋರುತ್ತಿದೆ‌. ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಮೇಲೆ ಎಲ್ಲೆಂದರಲ್ಲಿ ತುತಾದ ಬಸ್ಸಿನ ಮೇಲ್ಛಾವಣಿಯಿಂದ ಮಳೆಯ ಹನಿಗಳು ಸೋರುತ್ತಿವೆ.  ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ಅಲ್ಲದೇ ಈ ಹಿಂದೆಯೇ ಬಸ್ಸಿನ ಸ್ಥಿತಿಯ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ. ಆದರೆ ಅದನ್ನು ಲೆಕ್ಕಿಸದೇ ಮತ್ತೆ ಹಳೆಯ ಬಸ್ಸುಗಳನ್ನು ಸಂಚರಿಸಲು ಬಿಡುತ್ತಾರೆ. ಇದೀಗ ಮಳೆಗಾಲ ಬೇರೆ. ಇಂತಹ ಸಂದರ್ಭಗಳಲ್ಲಿ ಈ ಬಸ್ಸಿನಲ್ಲಿ  ಪ್ರಯಾಣಿಸುವುದೇ ದುಸ್ಥರವಾಗಿ ಬಿಟ್ಟಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments