ಸೋರುತ್ತಿರೋ ಬಸ್ : ಹಿಗ್ಗಾಮುಗ್ಗಾ ಉಗಿಯುತ್ತಿರೋ ಪ್ರಯಾಣಿಕರು

Webdunia
ಗುರುವಾರ, 10 ಅಕ್ಟೋಬರ್ 2019 (13:00 IST)
ಸಾರಿಗೆ ಇಲಾಖೆಯ ಬಸ್ ಮಳೆ ನೀರಿಗೆ ಸೋರುತ್ತಿದ್ದು, ಅವುಗಳಲ್ಲೇ ಪ್ರಯಾಣಿಸುತ್ತಿರುವ ಜನರು ಕ್ಯಾಕರಿಸಿ ಉಗಿಯುತ್ತಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಮತ್ತೆ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಜನರು ಮಳೆಗೆ ತತ್ತರಿಸಿ ಹೋಗಿದ್ದಾರೆ.

ಈ ಬಾರಿ ಮನೆ, ಮಠಗಳು ಅಷ್ಟೇ ಅಲ್ಲದೇ ಸಾರಿಗೆಯ ಬಸ್ಸು ಕೂಡಾ ಸೋರಲು ಆರಂಭಿಸಿದೆ. ಜನರು ಸಾರಿಗೆ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹುಬ್ಬಳ್ಳಿಯಿಂದ ಗುಡೇನಕಟ್ಟಿ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್ಸು ಮಳೆಯಿಂದ ಸೋರುತ್ತಿದ್ದು, ಮೊದಲೇ ಅರ್ಧದಷ್ಟು ಹಾಳಾದ ಬಸ್ಸು ಇದೀಗ ಮಳೆಯಿಂದಾಗಿ ಎಲ್ಲೆಂದರಲ್ಲಿ ಸೋರುತ್ತಿದೆ‌. ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಮೇಲೆ ಎಲ್ಲೆಂದರಲ್ಲಿ ತುತಾದ ಬಸ್ಸಿನ ಮೇಲ್ಛಾವಣಿಯಿಂದ ಮಳೆಯ ಹನಿಗಳು ಸೋರುತ್ತಿವೆ.  ಇದರಿಂದಾಗಿ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ಅಲ್ಲದೇ ಈ ಹಿಂದೆಯೇ ಬಸ್ಸಿನ ಸ್ಥಿತಿಯ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ. ಆದರೆ ಅದನ್ನು ಲೆಕ್ಕಿಸದೇ ಮತ್ತೆ ಹಳೆಯ ಬಸ್ಸುಗಳನ್ನು ಸಂಚರಿಸಲು ಬಿಡುತ್ತಾರೆ. ಇದೀಗ ಮಳೆಗಾಲ ಬೇರೆ. ಇಂತಹ ಸಂದರ್ಭಗಳಲ್ಲಿ ಈ ಬಸ್ಸಿನಲ್ಲಿ  ಪ್ರಯಾಣಿಸುವುದೇ ದುಸ್ಥರವಾಗಿ ಬಿಟ್ಟಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments