Webdunia - Bharat's app for daily news and videos

Install App

ಹಾಲಿನ ಡೈರಿಗೆ ನುಗ್ಗಿದ ಬಸ್: ಸಿಸಿ ಟಿವಿ ಯಲ್ಲಿ ಕಂಡಿದ್ದೇನು?

Webdunia
ಸೋಮವಾರ, 8 ಜುಲೈ 2019 (18:23 IST)
ಬೆಳ್ಳಂಬೆಳಿಗ್ಗೆ ಅತೀ ವೇಗವಾಗಿ ಚಾಲಾಯಿಸುತ್ತಿದ್ದ ಎಕ್ಸ್ ಪ್ರೆಸ್ ಬಸ್ಸೊಂದ್ ನಿಯಂತ್ರಣ ತಪ್ಪಿ ಹಾಲಿನ ಡೈರಿಗೆ ನುಗ್ಗಿದೆ.
ಉಡುಪಿಯ ಕಡಿಯಾಳಿಯಲ್ಲಿ ಈ ಘಟನೆ ನಡೆದಿದೆ.

ಕಾರ್ಕಳದಿಂದ ಉಡುಪಿಗೆ ಅಗಮಿಸುತ್ತಿದ್ದ ಗಣೇಶ್ ಟ್ರಾವೆಲ್ಸ್ ಎಕ್ಸ್ ಪ್ರೆಸ್ ಚಾಲಕ ಕಡಿಯಾಳಿ ಒಶಿಯಾನ್ ಪರ್ಲ್ ಹೊಟೇಲ್ ಬಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿದೆ. ಬಸ್ಸು ನೇರವಾಗಿ ರಸ್ತೆ ಫುಟ್ ಪಾತ್ ಹತ್ತಿ ಅಂಗಡಿಗೆ ಢಿಕ್ಕಿ ಹೊಡೆದಿದೆ.

ಫುಟ್ ಪಾತ್ ಎತ್ತರದಲ್ಲಿ ಕಾರಣ ಬಸ್ಸಿನ ವೇಗ ಕಡಿಮೆಯಾಗಿ ನಿಂತಿದೆ. ಹಾಲಿನ ಡೈಲಿಯೊಳಗಡೆ ಇದ್ದ ಇಬ್ಬರು ಯುವಕರು ಅದೃಷ್ಟವಶಾತ್ ಪಾರಾಗಿದ್ದಾರೆ.

ಅಂಗಡಿ ಸಂಪೂರ್ಣವಾಗಿ ಜಖಂ ಅಗಿ ಮೂರು ಲಕ್ಷ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ. ‌ಇತ್ತೀಚೆಗಷ್ಟೇ ಅಂಗಡಿ ಮಾಲೀಕ ಹೊಸದಾಗಿ ನವೀಕರಣ ಮಾಡಿಸಿದ್ದರು. ಅಪಘಾತ ನಡೆದ ಸಂದರ್ಭ ಅಂಗಡಿಯಲ್ಲಿ ಹಾಲು ಖರೀದಿಸಲು ಗ್ರಾಹಕರು ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿ ಹೋಗಿದೆ.

ವಿಪರೀತ ಮಳೆಯಿದ್ದ ಕಾರಣ ಬಸ್ಸಿನ ನಿಯಂತ್ರಣ ತಪ್ಪಿದೆ ಎಂದು ಬಸ್ಸು ಚಾಲಕ ತಿಳಿಸಿದ್ದಾನೆ. ಸ್ಥಳಕ್ಕೆ ಉಡುಪಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments