Webdunia - Bharat's app for daily news and videos

Install App

ಸಾಮಾಜಿಕ ಅಂತರದಿಂದ ಬಸ್ ಸಂಚಾರ ನಷ್ಟದಲ್ಲಿ!

Webdunia
ಶುಕ್ರವಾರ, 29 ಮೇ 2020 (19:08 IST)
ಸಾರಿಗೆ ಇಲಾಖೆಯ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಕರು ಸಂಚರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರಿಂದ ಸಾರಿಗೆ ಇಲಾಖೆಗೆ ಅಪಾರ ನಷ್ಟವಾಗುತ್ತಿದೆ.

ಕೋವಿಡ್ -19 ಲಾಕ್ ಡೌನ್ ನಿಂದ ಸಾರಿಗೆ ಇಲಾಖೆಗೆ ಸುಮಾರು 1800 ಕೋಟಿ ರೂಪಾಯಿಗಳಷ್ಟು ನಷ್ಟ ಉಂಟಾಗಿದ್ದು, ಲಾಕ್ ಡೌನ್ ಕುರಿತು ಕೇಂದ್ರ ಸರ್ಕಾರ ಜೂನ್ 1 ರಂದು ಹೊರಡಿಸುವ ಹೊಸ ಸುತ್ತೋಲೆಯನ್ನು ನೋಡಿಕೊಂಡು ಪುನಃ ಪರಿಶೀಲನೆ ಮಾಡುತ್ತೇವೆ.

ಈ ಕುರಿತು ಸಚಿವ ಸಂಪುಟ ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇಲ್ಲ. ಹೊಸ ಬಸ್ ನೀಡುವಿಕೆ ಹಾಗೂ ಹಳೆಯ ವಾಹನಗಳ ಸಂಚಾರವನ್ನು ನಿಲ್ಲಿಸುವ ಬೇಡಿಕೆ ನಮ್ಮ ಮುಂದೆ ಇದೆ. ಲಾಕ್ ಡೌನ್ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಸಾಕಷ್ಟು ನಷ್ಟ ಅನುಭವಿಸಿದ್ದು, ಇಂತಹ ಪರಿಸ್ಥಿತಿಯಲ್ಲಿ ವೆಚ್ಚವನ್ನು ಕಡಿಮೆ ಮಾಡುವಿಕೆ ಹಾಗೂ ಸೋರಿಕೆಯನ್ನು ತಡೆಯುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಕೆಲಸ ಮಾಡುವಂತೆ ಮನವಿ ಮಾಡಿದ್ದೇನೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments