ಲಾಕ್ ಡೌನ್ ನಡುವೆ ಈ ಜಿಲ್ಲೆಯಿಂದ ಬಸ್ ಸಂಚಾರ ಆರಂಭ

Webdunia
ಮಂಗಳವಾರ, 19 ಮೇ 2020 (19:24 IST)
ನಾಲ್ಕನೇ ಹಂತದ ಲಾಕ್ ಡೌನ್ ನಡುವೆ ಈ ಜಿಲ್ಲೆಯಿಂದಲೂ ಬಸ್ ಸಂಚಾರ ಆರಂಭಗೊಂಡಿದೆ.

ಕೆಲವು ಮುನ್ನೆಚ್ಚರಿಕಾ ಕ್ರಮಗಳ ನಡುವೆ ಉತ್ತರಕನ್ನಡ ಜಿಲ್ಲೆಯಲ್ಲಿಯೂ  ಬಸ್ ಸಂಚಾರ ಆರಂಭವಾಗಿದೆ.  

ಸುಮಾರು 58 ದಿನಗಳ ನಂತರ ಬಸ್ ಸಂಚಾರ ಪುನರಾರಂಭವಾದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಮೊದಲ ಬಸ್ ತೆರಳುವ ಮುನ್ನ ಚಪ್ಪಾಳೆ ತಟ್ಟಿ ಶುಭ ಹಾರೈಸಿದರು.

ಕಾರವಾರದಿಂದ ಹುಬ್ಬಳ್ಳಿಗೆ ಬೆಳಗ್ಗೆ 9 ಗಂಟೆಗೆ ಮೊದಲ ಬಸ್ ಸಂಚಾರ ಆರಂಭಿಸಿತು. ಬಸ್ ಪ್ರಯಾಣ ಆರಂಭಿಸುವ ಮುನ್ನ ಪ್ರತಿಯೊಬ್ಬ ಪ್ರಯಾಣಿಕರ ಮಾಹಿತಿಯನ್ನು ಪಡೆದುಕೊಂಡು ಅವರ ದೇಹದ ತಾಪಮಾನವನ್ನು ಥರ್ಮಲ್ ಸ್ಕ್ರೀನರ್ ಮೂಲಕ ಪರಿಶೀಲಿಸಲಾಯಿತು. ಅಲ್ಲದೇ ಪ್ರತಿ ಬಸ್‌ನಲ್ಲಿ 30 ಮಂದಿ ಪ್ರಯಾಣಿಕರಿಗಷ್ಟೇ ಅವಕಾಶ ನೀಡಲಾಯಿತು.

ಬಸ್ ಸಂಚಾರದ ಹಿನ್ನೆಲೆಯಲ್ಲಿ ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಹುಬ್ಬಳ್ಳಿಗೆ ತೆರಳಲು ಸುಮಾರು 100ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments