Webdunia - Bharat's app for daily news and videos

Install App

ಶಿಕ್ಷಣ ಸಂಸ್ಥೆಗಳೊಂದಿಗೆ ಉದ್ಯಮಗಳ ಸಂಬಂಧ ಅಗತ್ಯ: ಸಚಿವ ಅಶ್ವತ್ಥ ನಾರಾಯಣ

Webdunia
ಮಂಗಳವಾರ, 8 ಫೆಬ್ರವರಿ 2022 (20:05 IST)
ಬೆಂಗಳೂರು:-ರಾಜ್ಯದಲ್ಲಿ ಜಾರಿಗೆ ಬರುತ್ತಿರುವ ನೂತನ ಶಿಕ್ಷಣ ನೀತಿಯು ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದೆ. ಆದ್ದರಿಂದ ಉದ್ದಿಮೆಗಳು ಶಿಕ್ಷಣ ಸಂಸ್ಥೆಗಳೊಂದಿಗೆ ತಮ್ಮ ಅಗತ್ಯಗಳಿಗೆ ತಕ್ಕಂತೆ ರಚನಾತ್ಮಕ ಸಂಬಂಧ ಹೊಂದಬೇಕು ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸೋಮವಾರ ಬೆಂಗಳೂರು ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟವು ಆರಂಭಿಸಿರುವ ಉದ್ಯಮ ಪರಿಪೋಷಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಬೆಂಗಳೂರು ನಗರವು ನವೋದ್ಯಮಗಳಿಗೆ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಉದ್ದಿಮೆಗಳ ಬೆಳವಣಿಗೆಗೆ ಅಗತ್ಯವಿರುವ ಸಕಲ ಬಗೆಯ ನೆರವನ್ನೂ ನೀಡಲು ಸರ್ಕಾರದ ಮುಕ್ತ ಮನಸ್ಸು ಹೊಂದಿದೆ. ಈ ಸಂಬಂಧ ಹತ್ತಾರು ಉಪಯುಕ್ತ ನೀತಿಗಳನ್ನು ರೂಪಿಸಿದೆ.
ಒಕ್ಕೂಟವು ಸರಕಾರ ಕಡಿಮೆ ಶುಲ್ಕವನ್ನು ನಿಗದಿ ಪಡಿಸಿ ಉದ್ಯಮ ಪರಿಪೋಷಣೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಎನ್ಐಪಿ ಜಾರಿಯಲ್ಲಿ ಉದ್ಯೋಗ ಸೃಷ್ಟಿ ಮತ್ತು ಉದ್ದಿಮೆಗಳ ಜೊತೆಗಿನ ಬಾಂಧವ್ಯಕ್ಕೆ ಮಹತ್ವ ಕೊಡಲಾಗಿದೆ ಎಂದು ಅವರು ಹೇಳಿದರು.
ಶಿಕ್ಷಣವು ಸೇರಿದಂತೆ ಸಮಗ್ರ ಶಿಕ್ಷಣ ವ್ಯವಸ್ಥೆಯ ಸುಧಾರಣೆಯನ್ನು ತ್ವರಿತ ಗತಿಯಲ್ಲಿ ಮಾಡಲಾಗುತ್ತಿದೆ. ಇದರ ಜೊತೆಗೆ ಸಂಶೋಧನೆ ಮತ್ತು ನಾವೀನ್ಯತೆಯ ನೀತಿಯನ್ನು ರೂಪಿಸಲಾಗಿದೆ. ಬೆಂಗಳೂರು ನಗರವು ಉದ್ಯೋಗ ಸಂಸ್ಕೃತಿಯಲ್ಲಿ ಪ್ಯಾರಿಸ್ ಸೇರಿದಂತೆ ವಿಶ್ವದ ಅತ್ಯುತ್ತಮ ನಗರಗಳನ್ನು ಕೂಡ ಮೀರಬೇಕು. ಕರ್ನಾಟಕವು ಉಜ್ವಲ ಅವಕಾಶಗಳ ತಾಣವಾಗಿದೆ, ಬಂಡವಾಳ ಹೂಡಿಕೆಗೆ ಪ್ರಶಸ್ತಿಯಾಗಿದೆ ಎಂದು ಸಚಿವರು ಹೇಳಿದರು.
ಸಮಾರಂಭದಲ್ಲಿ ಬೆಂಗಳೂರು ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟದ ಪದಾಧಿಕಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments