Webdunia - Bharat's app for daily news and videos

Install App

ಲೈಸನ್ಸ್ ಪಡೆಯದೆ ವ್ಯಾಪಾರ, ವಹಿವಾಟು-ಎಪಿಎಂಸಿ ವರ್ತಕರಿಗೆ ಸರ್ಕಾರದಿಂದ ಶಾಕ್

Webdunia
ಬುಧವಾರ, 11 ಅಕ್ಟೋಬರ್ 2023 (14:00 IST)
ಲೈಸನ್ಸ್​ ಪಡೆದು ವ್ಯಾಪಾರ ವಹಿವಾಟು ನಡೆಸದೇ ಇರುವ ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲಾಳಿ ಪರವಾನಗಿಗಳನ್ನು ನಿಯಮಾನುಸಾರ ರದ್ದುಪಡಿಸಲು ಸರ್ಕಾರ ಮುಂದಾಗಿದೆ.ಲೈಸನ್ಸ್ ಪಡೆದು ವ್ಯಾಪಾರ, ವಹಿವಾಟು ನಡೆಸದೇ ಇರುವ ವರ್ತಕರಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಲು ಮುಂದಾಗಿದೆ.ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲಾಲರ ಪರವಾನಗಿಗಳನ್ನು ನಿಯಮಾನುಸಾರ ರದ್ದುಪಡಿಸಲು ನಿರ್ಧರಿಸಲಾಗಿದೆ.ಇದಕ್ಕೆ ವರ್ತಕರ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
 
ಕೃಷಿ ಮಾರಾಟ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲ ಎಪಿಎಂಸಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.ಮೂರು ವರ್ಷ ವ್ಯಾಪಾರ ಮಾಡದ ವರ್ತಕರ ಲೈಸನ್ಸ್ ರದ್ದುಗೊಳಿಸಬೇಕೆಂದು ತಿಳಿಸಲಾಗಿದೆ.ಕಳೆದ ಮೂರು ವರ್ಷ ವ್ಯಾಪಾರ ವಹಿವಾಟು ಮಾಡದೇ ಇರುವ ಕರ್ನಾಟಕ ರಾಜ್ಯದ ಮಾರ್ಕೆಟ್ ಯಾರ್ಡ್‌ನಲ್ಲಿರುವ ವ್ಯಾಪಾರಸ್ಥರಿಗೆ ಈ ನೊಟೀಸ್‌ ನೀಡಲಾಗಿದೆ.ಇದಕ್ಕೆ ಏಳು ದಿನದಲ್ಲಿ ಪ್ರತಿಕ್ರಿಯಿಸಲು ಇಲಾಖೆ ತಿಳಿಸಲಾಗಿದೆ.2020ರಿಂದ ಎರಡು ವರ್ಷ ಕೊರೊನಾದಿಂದಾಗಿ ಯಾವುದೇ ವಹಿವಾಟು ನಡೆದಿಲ್ಲ.ಅಲ್ಲದೇ ನಾನಾ ಕಾರಣಗಳಿಗೆ ವಹಿವಾಟು ಅಷ್ಟಾಗಿ ನಡೆಯುತ್ತಿಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯದ 2 ಸಾವಿರ ಲೈಸನ್ಸ್ ನೊಟೀಸ್ ನೀಡಲಾಗಿದೆ.ಕೊರೊನಾ, ಅತಿವೃಷ್ಟಿ ಹಾಗೂ ಬರಗಾಲದ ಕಾರಣದಿಂದ ಎಲ್ಲವೂ ತಲೆಕೆಳಗಾಗಿದೆ.ಇಂತಹ ಸಂದರ್ಭದಲ್ಲಿ ವ್ಯಾಪಾರಸ್ಥರು ಕೈಕಟ್ಟಿ ಕುಳಿತಿದ್ದಾರೆ.ಹೀಗಿದ್ದಾಗ ಲೈಸನ್ಸ್ ರದ್ದುಗೊಳಿಸುವುದು ಎಷ್ಟು ಸರಿ? ಎಂದು ವರ್ತಕರು ಅಸಮಾಧಾನ ಹೊರಹಾಕಿದರು, ಈ ವರ್ಷ ಬರಗಾಲದಿಂದಾಗಿ ಎಪಿಎಂಸಿಗೆ ಕೃಷಿ ಉತ್ಪನ್ನಗಳು ಬರುತ್ತಿಲ್ಲ.ಈ ಮಧ್ಯೆ ಎಪಿಎಂಸಿ ನೂತನ ಕಾಯ್ದೆ ಪ್ರಕಾರ, ಎಪಿಎಂಸಿಯಾಚೆಗೂ ವಹಿವಾಟು ನಡೆಸಬಹುದಾಗಿದೇ ಅನೇಕ ವರ್ತಕರು ರೈತರ ಹೊಲಕ್ಕೆ ಹೋಗಿ ವ್ಯಾಪಾರ ಮಾಡಿದ್ದಾರೆ. ಹಾಗಾಗಿ ಎಪಿಎಂಸಿ ಯಾರ್ಡ್‌ನಲ್ಲಿ ವಹಿವಾಟು ಕಡಿಮೆಯಾಗಿದೆ.ಹೀಗಾಗಿ ವರ್ತಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments