Webdunia - Bharat's app for daily news and videos

Install App

ಉದ್ಯಮಿ ಬಸವರಾಜ ಅಂಬಿ ಕಿಡ್ನ್ಯಾಪ್ ಪ್ರಕರಣ: ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಮಂಜುಳಾ ಪ್ರಮುಖ ಸೂತ್ರಧಾರೆ

Sampriya
ಸೋಮವಾರ, 3 ಮಾರ್ಚ್ 2025 (15:33 IST)
Photo Courtesy X
ಬೆಳಗಾವಿ: ಮೂಡಲಗಿ ತಾಲ್ಲೂಕಿನ ರಾಜಾಪುರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ ಅಂಬಿ ಅವರನ್ನು ಕಿಡ್ನ್ಯಾಪ್ ಮಾಡಿ  ₹5 ಕೋಟಿಗೆ ಬೇಡಿಕೆಯಿಟ್ಟ ಪ್ರಕರಣ ಸಂಬಂಧ ಗೋಕಾಕ ತಾಲ್ಲೂಕಿನ ಕೊಣ್ಣೂರಿನ ಮಂಜುಳಾ ರಾಮನಗಟ್ಟಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಮುಖ ಆರೋಪಿ ಮಂಜುಳಾ, ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಅವರು ಗುರುತಿಸಿಕೊಂಡಿದ್ದಾರೆ.

ಇನ್ನೂ ಈ ಅಪಹರಣ ಪ್ರಕರಣದಲ್ಲಿ ಮಂಜುಳಾ ಅವರದ್ದು ಪ್ರಮುಖ ಪಾತ್ರವಿರುವುದು ತಿಳಿದುಬಂದಿದೆ. ರಾಜಕೀಯ ಪಕ್ಷ ಮತ್ತು ಸಂಘಟನೆಯೊಂದಿಗೆ ಮಹಿಳೆ ಗುರುತಿಸಿಕೊಂಡಿದ್ದಾರೆ. ಇನ್ನೂ ಈ ಹಿಂದೆ ತಹಶೀಲ್ದಾರ್‌ ಕಚೇರಿಯಲ್ಲಿ 'ಡಿ' ದರ್ಜೆ ನೌಕರಿ ಮತ್ತು ಹೊರಗುತ್ತಿಗೆ ನೌಕರಿ ಕೊಡಿಸುವುದಾಗಿ ಇಬ್ಬರಿಂದ ತಲಾ ₹2.5 ಲಕ್ಷ ಲಂಚ ಪಡೆದ ಸಂಬಂಧ ಕುಲಗೋಡ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನೂ ಕಿಡ್ನ್ಯಾಪ್ ಪ್ರಕರಣ ಸಂಬಂಧ ಮಂಜುಳಾ ಜತೆಗೆ, ಯಲ್ಲೇಶ ವಾಲಿಕಾರ, ಪರಶುರಾಮ ಕಾಂಬಳೆಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಲಾಗುತ್ತಿದೆ.

ಇನ್ನೂ ಕಿಡ್ನ್ಯಾಪ್ ಪ್ರಕರಣ ಸೂತ್ರಧಾರೆ ಮಂಜುಳಾ ಆಗಿದ್ದು, ಬಸವರಾಜ ಅಂಬಿ ಅಪಹರಣಕ್ಕಾಗಿ  ಸಹಕರಿಸಿದ ಆರೋಪಿಗಳಿಗೂ ಹಣ ಕೊಡುವುದಾಗಿ ತಿಳಿಸಿದ್ದರು.

ಮಂಜುಳಾ ಪುತ್ರ ಈಶ್ವರನನ್ನು ಈಗಾಗಲೇ ಬಂಧಿಸಿದ್ದೆವು. ಹಣ ಮಾಡಬೇಕು, ಐಷಾರಾಮಿಯಾಗಿ ಬದುಕು ಸಾಗಿಸಬೇಕೆಂಬ ಆಸೆಯಿಂದ ಈ ಅಪಹರಣ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಬಸವರಾಜ ಬಳಿ ಆರೋಪಿಗಳು ಕಸಿದುಕೊಂಡಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ 6 ಮೊಬೈಲ್‌, ನಾಲ್ಕು ಕಾರು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಚಿವ ಸತೀಶ ಜಾರಕಿಹೊಳಿ, ಪ್ರಿಯಾಂಕಾ ಜಾರಕಿಹೊಳಿ ಅವರೊಂದಿಗೆ ಈ ಮಹಿಳೆ ಕ್ಲಿಕ್ಕಿಸಿಕೊಂಡ ಫೋಟೊಗಳೂ ವೈರಲ್ ಆಗಿದೆ.

'ಆರೋಪಿ ಕಾಂಗ್ರೆಸ್ ಕಾರ್ಯಕರ್ತೆ ಅಲ್ಲ'

'ಅಪಹರಣ ಪ್ರಕರಣದಲ್ಲಿ ಭಾಗಿಯಾಗಿರುವ ಮಂಜುಳಾ ರಾಮನಗಟ್ಟಿ ಕಾಂಗ್ರೆಸ್ ಕಾರ್ಯಕರ್ತೆ ಅಲ್ಲ. ಅವರಿಗೆ ಪಕ್ಷದ ಯಾವುದೇ ಹುದ್ದೆ ಅಥವಾ ಸದಸ್ಯತ್ವ ಕೊಟ್ಟಿಲ್ಲ' ಎಂದು ಕಾಂಗ್ರೆಸ್ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಲ್ಪನಾ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments