Select Your Language

Notifications

webdunia
webdunia
webdunia
webdunia

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಬ್ಲ್ಯಾಕ್‌ಮೇಲರ್ ಸತ್ತಾರ್ ಮಹಾರಾಷ್ಟ್ರದಲ್ಲಿ ಅಂದರ್‌

Accused Amdul Sattar, Bussinesman Mumtax Ali, Dakshina Kannada

Sampriya

ಮಂಗಳೂರು , ಬುಧವಾರ, 9 ಅಕ್ಟೋಬರ್ 2024 (17:56 IST)
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ನಾಪತ್ತೆಯಾಗಿದ್ದ ಪ್ರಕರಣದ ಆರೋಪಿ ಅಬ್ದುಲ್ ಸತ್ತಾರ್‌ನನ್ನು ಇಂದು ಮಹಾರಾಷ್ಟ್ರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಕುಳೂರಿನ ಫಲ್ಗುಣಿ ನದಿಗೆ ಹಾರಿ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಪ್ರಚೋದನೆ ಹಿಂದೆ ಹಲವರ ಕೈವಾಡವಿದೆ ಎಂದು ಅಲಿ ಅವರ ತಮ್ಮ ಹೈದರ್ ಅಲಿ ಕಾವೂರು ಠಾಣೆಗೆ ದೂರು ನೀಡಿದ್ದರು.

ಮಹಿಳೆಯೊಬ್ಬರನ್ನು ಮುಂದಿಟ್ಟುಕೊಂಡು ಸತ್ತಾರ್ ಹನಿಟ್ರ್ಯಾಪ್ ಮಾಡಿರುವುದಾಗಿ ಮುಮ್ತಾಜ್ ಅಲಿ ಸಹೋದರ ಹೈದರ್ ಅಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅದರಂತೆ ಕೃಷ್ಣಾಪುರದ ರೆಹಮತ್ ಹಾಗೂ ಆಕೆಯ ಪತಿ ಶೋಯಬ್‌ ಈಗಾಗಲೇ ಬಂಧನವಾಗಿದೆ. ಮುಸ್ಲಿಂ ಮುಖಂಡ ಹಾಗೂ ಉದ್ಯಮಿ ಬಿಎಂ ಮುಮ್ತಾಜ್ ಅಲಿ ಅವರಿಗೆ ಬೆದರಿಕೆಯೊಡ್ಡಿ ಸುಲಿಗೆ ಮಾಡಿದ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಅಬ್ದುಲ್ ಸತ್ತಾರ್‌ನನ್ನು ಇದೀಗ ವಶಕ್ಕೆ ಪಡೆಯಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿಡಿಯೋ ಕಾಲ್ ಸಂಭಾಷಣೆ ಇಟ್ಟುಕೊಂಡು ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ದೂರು