Webdunia - Bharat's app for daily news and videos

Install App

ಲಾಕ್‌ ಡೌನಿನಲ್ಲಿ ಸಾವಿರ ಕ್ವಿಂಟಾಲ್ ಬಾಳೆ ಕಾಯಿ ಖರೀದಿ

Webdunia
ಮಂಗಳವಾರ, 16 ಜೂನ್ 2020 (16:11 IST)
ಕೊರೊನಾ ಸಂಕಷ್ಟದ ಸಮಯದಲ್ಲೂ ಸಾವಿರ ಕ್ವಿಂಟಾಲ್ ಬಾಳೆಕಾಯಿ ಖರೀದಿ ಮಾಡಲಾಗಿದೆ.

ಈ ಮೂಲಕ ಉತ್ತರಕನ್ನಡ ಜಿಲ್ಲೆ ಶಿರಸಿಯ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಸಂಘವು ರೈತರ ಶ್ರಮ ವ್ಯರ್ಥವಾಗದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕೊರೊನಾ ಸೊಂಕಿನ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿತ್ತು. ಪರಿಣಾಮ ಬೆಳೆದ ಬಾಳೆಕಾಯಿಯನ್ನು ಎಲ್ಲೂ ಮಾರಾಟ ಮಾಡಲು ಸಾಧ್ಯವಾಗದೇ ರೈತರು ಅತಂತ್ರರಾಗಿದ್ದರು. ಬಾಳೆಕಾಯಿ ಬೆಳೆದ ರೈತರು ತೀವ್ರ ನಷ್ಟ ಹೊಂದಿ ಸಂಕಷ್ಟಕ್ಕೊಳಗಾಗಿದ್ದರು. ಈ ಸಮಯದಲ್ಲಿ ರೈತರ ನೆರವಿಗೆ ಮುಂದಾದ ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಸಂಘ ರಾಜ್ಯದಲ್ಲಿಯೇ ಮೊಟ್ಟ ಬಾರಿಗೆ ಬಾಳೆಕಾಯಿ ಟೆಂಡರ್ ವ್ಯವಸ್ಥೆ ಕಲ್ಪಿಸಿತ್ತು. ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ರೈತರಿಂದ ಬಾಳೆಕಾಯಿ ಖರೀದಿಗೆ ಸಂಘ ಮುಂದಾಯಿತು.

ಇದು ಕೇವಲ ಶಿರಸಿಯಲ್ಲಷ್ಟೇ ಅಲ್ಲದೇ ಪಕ್ಕದ ಯಲ್ಲಾಪುರ, ಸಿದ್ದಾಪುರದಲ್ಲೂ ಸಹ ಬಾಳೆಕಾಯಿ ಟೆಂಡರ್ ವ್ಯವಸ್ಥೆ ಮಾಡಿತ್ತು. ಈ ಟೆಂಡರ್‌ಗಳಲ್ಲಿ ಭಾಗವಹಿಸಿದ ಸುಮಾರು ಮೂನ್ನೂರಕ್ಕೂ ಹೆಚ್ಚು ರೈತರು ತಾವು ಬೆಳೆದ ಬಾಳೆಕಾಯಿಯನ್ನು ಮಾರಾಟ ಮಾಡಿದ್ದಾರೆ.

ಸಾಮಾನ್ಯ ದಿನಗಳಲ್ಲಿ ಕೆಜಿಗೆ ಸರಿಸುಮಾರು 10 ರೂ. ವರೆಗೆ ಮಾರಾಟವಾಗುತ್ತಿದ್ದ ಬಾಳೆಕಾಯಿ ಈ ಟೆಂಡರ್‌ನಲ್ಲಿ ಸುಮಾರು18 ರಿಂದ 20 ರೂ. ವರೆಗೆ ಮಾರಾಟವಾಗಿದೆ. ಅಂದರೇ ಸುಮಾರು 8 ರಿಂದ 10ರೂ. ವರೆಗೆ ಪ್ರತಿ ಕೆಜಿಯ ಮೇಲೆ ಬಾಳೆಕಾಯಿ ಬೆಳೆದ ರೈತರು ಲಾಭ ಪಡೆದಿದ್ದಾರೆ. ಇನ್ನೂ ಇಲ್ಲಿ ಖರೀದಿಸಿದ ಬಾಳೆಕಾಯಿಯನ್ನು ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಪಕ್ಕದ ಗೋವಾ ಹಾಗೂ ಕೇರಳ ರಾಜ್ಯಗಳಿಗೂ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments