Select Your Language

Notifications

webdunia
webdunia
webdunia
webdunia

ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದ ಹುಣಸೂರು ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿ

ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದ ಹುಣಸೂರು ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿ
ಮೈಸೂರು , ಶುಕ್ರವಾರ, 29 ನವೆಂಬರ್ 2019 (07:34 IST)
ಮೈಸೂರು : ಹುಣಸೂರು ಕ್ಷೇತ್ರದ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಗೆ ತೀವ್ರ ಹೃದಯಾಘಾತವಾಗಿ ಕುಸಿದುಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.



ಹುಣಸೂರಿನ ಕುಲ್ಕಣೆ ಉಮೇಶ್ ಎಂಬುವವರು ಹುಣಸೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಪ್ರಚಾರ ಕಾರ್ಯದಿಂದ ಆಯಾಸಗೊಂಡಿದ್ದ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಮೈಸೂರಿನ ಜಯದೇವ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 


ಹುಣಸೂರು ಉಪಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಚ್.ವಿಶ್ವನಾಥ್, ಕಾಂಗ್ರೆಸ್ ನಿಂದ ಎಚ್.ಪಿ.ಪಾಟೀಲ್, ಜೆಡಿಎಸ್ ನಿಂದ ಸೋಮಶೇಖರ್ ಕಣಕ್ಕೀಳಿಯುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಟೀಚರ್ ಟ್ರೈನಿಂಗ್ ವೇಳೆ ನಾಗಿಣಿ ನೃತ್ಯ ಮಾಡಿದ ಟೀಚರ್ ಗೆ ಆಗಿದ್ದೇನು ಗೊತ್ತಾ?