Webdunia - Bharat's app for daily news and videos

Install App

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

Krishnaveni K
ಶುಕ್ರವಾರ, 22 ಆಗಸ್ಟ್ 2025 (16:35 IST)
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ಮಾಸ್ಕ್ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಇದೀಗ ತಾವೇ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಹೇಳಿದ್ದಾರೆ.

 
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗುಂಡಿಗಳಲ್ಲಿ ಏನೂ ಸಿಕ್ಕದೇ ಈಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಆತಂಕದಲ್ಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ದೂರುದಾರನಿಗೆ ಮುಖವಾಡ ಹಾಕುವ ನಿರ್ಧಾರ ಮಾಡಿದ್ದರು. ದೂರುದಾರನ ಮುಖವಾಡವೂ ಕಳಚಿಬಿದ್ದಿದೆ ಎಂದು ಹೇಳಿದರು.
 
ಧರ್ಮಸ್ಥಳದ ವಿಚಾರವಾಗಿ ಬಿಜೆಪಿ ನಮ್ಮ ಹೋರಾಟವನ್ನು ಈಗಾಗಲೇ ಘೋಷಿಸಿದೆ; ‘ಧರ್ಮ ರಕ್ಷಣೆಗಾಗಿ ಧರ್ಮ ಯುದ್ಧ’ ನಡೆಸಲಿದ್ದೇವೆ ಎಂದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎಂದರೆ, ಪಾಪ ಸಿದ್ದರಾಮಯ್ಯನವರು ಯಾರೋ ಎಡಪಂಥೀಯ ಶಕ್ತಿಗಳ ಒತ್ತಡಕ್ಕೆ ಮಣಿದು ಧರ್ಮಸ್ಥಳದಲ್ಲಿ ಎಸ್‍ಐಟಿ ತನಿಖೆಗೆ ಆದೇಶಿಸಿದರು. ನಾವೂ ಅದನ್ನು ಸ್ವಾಗತ ಮಾಡಿದ್ದೆವು. ಗುಂಡಿ ಬಗೆದಂತೆ ಏನೋ ಸಿಕ್ಕುವುದಾಗಿ ವಿಧಾನಸೌಧದಲ್ಲಿ ಕುಳಿತು ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದರು. 15- 16 ಗುಂಡಿ ತೋಡಿದರೂ ಧರ್ಮಸ್ಥಳದಲ್ಲಿ ಏನೂ ಸಿಕ್ಕಿಲ್ಲ ಎಂದು ವಿವರಿಸಿದರು.
 
ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅವಿವೇಕತನದಿಂದ ನಡೆದುಕೊಳ್ಳುತ್ತಿದೆ. ಆ ದೂರುದಾರ, ಆತನ ಹಿಂದಿರುವ ದುಷ್ಟ ಶಕ್ತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ; ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರಗಳು ನಡೆಯುತ್ತಿವೆ. ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಿದರೆ, 24 ಗಂಟೆಯಲ್ಲಿ ಅವರನ್ನು ಬಂಧಿಸುತ್ತಾರೆ ಎಂದು ಆಕ್ಷೇಪಿಸಿದರು.
 
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ 15-20 ದಿನಗಳಿಂದ ಸರಾಗವಾಗಿ ಅಪಪ್ರಚಾರ ನಡೆಯುತ್ತಿದೆ. ಆದರೂ, ಇವರ ವಿರುದ್ಧ ತನಿಖೆ ಮಾಡುತ್ತಿಲ್ಲ; ಇದರ ವಿರುದ್ಧ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ ಎಂದು ಸ್ಪಷ್ಟಪಡಿಸಿದರು.
 
11 ಸಾವಿನ ಹರಿಕಥೆ ಹೇಳಿದ ಸಿಎಂ

ಚಿನ್ನಸ್ವಾಮಿ ಕ್ರೀಡಾಂಗಣದ ಆರ್.ಸಿ.ಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯ ಕುರಿತ ಉತ್ತರ ಕೊಡುವಾಗ ಮುಖ್ಯಮಂತ್ರಿಗಳು ಸದನದಲ್ಲಿ ಬಹಳ ಭಾವುಕರಾಗಿ ಆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ, ಅವರು ಹರಿಕಥೆ ಹೇಳುವ ಕೆಲಸ ಮಾಡಿದರು ಎಂದು ವಿಜಯೇಂದ್ರ ಅವರು ಟೀಕಿಸಿದರು.
 
ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆದ ಇಂಥ ಸಾವಿನ ಅಂಕಿ ಅಂಶವನ್ನು ಅವರು ನೀಡಿದರು. ಬಿಜೆಪಿ ಸಾವಿನಲ್ಲಿ ರಾಜಕೀಯ ಮಾಡುತ್ತಿಲ್ಲ. ಕೋವಿಡ್ ವೇಳೆ ಆಮ್ಲಜನಕ ಕೊರತೆಯಿಂದ ಚಾಮರಾಜನಗರ ಜಿಲ್ಲೆಯÀಲ್ಲಿ 36 ಜನರು ಮೃತಪಟ್ಟಿದ್ದರು. ಆಗ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕಳೆದ ಚುನಾವಣೆ ಸಂದರ್ಭದಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಮೃತ 36 ಜನರ ಕುಟುಂಬದವರಿಗೆ ಸರಕಾರಿ ನೌಕರಿ ಕೊಡುವುದಾಗಿ ತಿಳಿಸಿದ್ದರು. ಸರಕಾರ ಬಂದು ಎರಡೂವರೆ ವರ್ಷ ಆದರೂ ನಿಮ್ಮ ಯೋಗ್ಯತೆಗೆ ಸರಕಾರಿ ನೌಕರಿ ಕೊಡಲು ಸಾಧ್ಯವಾಯಿತೇ ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಸಾವಿನಲ್ಲಿ ರಾಜಕೀಯ ಮಾಡುವವರು ಕಾಂಗ್ರೆಸ್ ಪಕ್ಷದವರು ಎಂದು ಆರೋಪಿಸಿದರು.

ಕಾಲ್ತುಳಿತ ಸಾವಿನ ವಿಷಯದಲ್ಲಿ ತಮ್ಮ ತಪ್ಪನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಅಮಾಯಕ ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಂಡಿರಲ್ಲವೇ ಎಂದು ಕೇಳಿದರು. ಪೊಲೀಸ್ ಇಲಾಖೆಗೇ ಅಪಮಾನ ಮಾಡುವ ಕೆಲಸ ಮಾಡಿದಿರಲ್ಲವೇ? ಅದಕ್ಕೆ ಮುಖ್ಯಮಂತ್ರಿಗಳು ಉತ್ತರ ಕೊಡಬೇಕಿತ್ತು ಎಂದು ಆಗ್ರಹಿಸಿದರು.

ಆರ್.ಸಿ,ಬಿ, ಕೆಎಸಿಎ, ಡಿಎನ್‍ಎ, ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರು ಎಂಬ ತೀರ್ಪನ್ನು ಮುಖ್ಯಮಂತ್ರಿಗಳೇ ಕೊಟ್ಟಿದ್ದಾರೆ. ಈ ಸಂಪೂರ್ಣ ಧಾರವಾಹಿಯಲ್ಲಿ ಮುಖ್ಯಮಂತ್ರಿಗಳೇ ಅಪರಾಧಿ ನಂಬರ್ 1. ಉಪ ಮುಖ್ಯಮಂತ್ರಿಗಳು ಎಡರನೇ ಅಪರಾಧಿ. ಇವರ ಹುಳುಕನ್ನು ಮುಚ್ಚಿ ಹಾಕಿಕೊಳ್ಳಲು ಭಾಷಣ ಬಿಗಿಯುತ್ತಾರೆ ಎಂದು ಟೀಕಿಸಿದರು.

ವಿಧಾನಸೌಧದ ಬಳಿ ವಿಜಯೋತ್ಸವ ಮಾಡಲು ತೀರ್ಮಾನ ಮಾಡಿದಿರಲ್ಲವೇ? ಆರ್‍ಸಿಬಿಯಲ್ಲಿ ಕರ್ನಾಟಕದ ಎಷ್ಟು ಆಟಗಾರರು ಇದ್ದಾರೆ ಎಂಬುದು ಆಗ ನಿಮಗೆ ಗೊತ್ತಿರಲಿಲ್ಲವೇ? ತಮ್ಮ ಕುಟುಂಬದ ಸದಸ್ಯರನ್ನು ಕರೆದುಕೊಂಡು ಸೆಲ್ಫಿ ಹೊಡೆಸಿಕೊಂಡಿರಲ್ಲವೇ? ಆಗ ಈ ತಂಡದಲ್ಲಿ ಎಷ್ಟು ಕನ್ನಡಿಗರಿದ್ದಾರೆ ಎಂದು ಗೊತ್ತಿರಲಿಲ್ಲವೇ? ಇವತ್ತು ಮುಖ್ಯಮಂತ್ರಿಗಳಿಗೆ ನೆನಪಾಗುತ್ತಿದೆಯೇ ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು. ಕಾಲ್ತುಳಿತದ 11 ಸಾವು ಸರಕಾರಿ ಪ್ರಾಯೋಜಿತ ಕೊಲೆ ಎಂದು ಅವರು ತಿಳಿಸಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments