Select Your Language

Notifications

webdunia
webdunia
webdunia
webdunia

ಧರ್ಮಸ್ಥಳದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಬೇಕು: ಬಿವೈ ವಿಜಯೇಂದ್ರ

BY Vijayendra

Krishnaveni K

ಬೆಂಗಳೂರು , ಶನಿವಾರ, 23 ಆಗಸ್ಟ್ 2025 (15:59 IST)
ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದವರು, ಷಡ್ಯಂತ್ರ ಮಾಡಿದವರು ಯಾರು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಧರ್ಮಸ್ಥಳದ ವಿರುದ್ಧದ ಷಡ್ಯಂತರ ನಡೆಯುತ್ತಿದೆ ಎಂದು ನಾವು ಹೇಳಿದ್ದು ಈಗ ನಿಜವಾಗಿದೆ. ದೂರುದಾರ ಮುಸುಕುದಾರಿಯ ಬಂಧನ ಸತ್ಯದ ಮೇಲೆ ಬೆಳಕು ಚೆಲ್ಲಿದೆ. ಕಪೋಲ ಕಲ್ಪಿತ ದೂರು ನೀಡಿ ಸಿಕ್ಕಿಬಿದ್ದಿರುವ ಈತನ ಹಿಂದಿರುವ ಶಕ್ತಿಗಳು ಯಾವುದು? ಷಡ್ಯಂತ್ರ ರೂಪಿಸಿದ ವಿಕೃತಿಗಳು ಯಾರು? ಇವರೆಲ್ಲರ ಮುಖವಾಡಗಳು ಬಯಲಾಗಬೇಕಿದೆ, ಇಡೀ ರಾಜ್ಯದ ಹಾಗೂ ದೇಶದ ಗಮನವನ್ನು ಕೇಂದ್ರೀಕರಿಸುವಂತೆ ಮಾಡಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರ ಪವಿತ್ರ ಧರ್ಮಸ್ಥಳವನ್ನು ಅಪವಿತ್ರ ಗೊಳಿಸಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಿದೆ.

ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಬಿತ್ತರಗೊಂಡ ಈ ಅಪಪ್ರಚಾರದ ಹಿಂದೆ ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ ತಳ್ಳಿಹಾಕಲಾಗದು. ಈ ಪ್ರಕರಣವನ್ನು ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರವೆಂದು ಸೀಮಿತಗೊಳಿಸದೆ, ಇದು ಭಾರತೀಯರ ಭಾವನೆಗಳು ಹಾಗೂ ಪರಂಪರೆಯ ಮೇಲೆ ನಡೆದ ವ್ಯವಸ್ಥಿತ ಪಿತೂರಿ ಎಂದು ಪರಿಗಣಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಎಡ ಪಂಥೀಯರ ಒತ್ತಾಯಕ್ಕೆ ಮಣಿದು ಹೇಗೆ SIT ರಚಿಸಿ ತನಿಖೆ ನಡೆಸಿತೋ, ಅದೇ ಮಾದರಿಯಲ್ಲಿ ಧರ್ಮಸ್ಥಳದ ವಿರುದ್ಧ  ಷಡ್ಯಂತ್ರ ನಡೆಸಿದವರ ವಿರುದ್ಧವೂ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಲಿ ಎಂದು ಆಗ್ರಹಿಸುತ್ತೇನೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್