ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಲು ಮತ್ತೆ ಬಿವೈ ವಿಜಯೇಂದ್ರ ದೆಹಲಿಗೆ

Krishnaveni K
ಬುಧವಾರ, 18 ಡಿಸೆಂಬರ್ 2024 (10:26 IST)
ನವದೆಹಲಿ: ಬಿಜೆಪಿಯಲ್ಲಿ ಭಿನ್ನಮತ ಶಮನವಾಗುವ ಲಕ್ಷಣ ಕಾಣುತ್ತಿಲ್ಲ. ಬಿವೈ ವಿಜಯೇಂದ್ರ ಮತ್ತೆ ದೆಹಲಿಗೆ ತೆರಳಿ ಯತ್ನಾಳ್ ಟೀಂ ವಿರುದ್ಧ ದೂರು ನೀಡಲು ಮುಂದಾಗಿದೆ.

ಸದನದಲ್ಲಿ ಇಬ್ಬರೂ ನಾಯಕರು ಪರಸ್ಪರ ಮುಖಾಮುಖಿಯಾಗಿದ್ದರು. ಬೆಳಗಾವಿ ಅಧಿವೇಶನದಲ್ಲಿ ಅಕ್ಕಪಕ್ಕವೇ ಕುಳಿತಿದ್ದ ವಿಜಯೇಂದ್ರ, ಯತ್ನಾಳ್ ಪರಿಸ್ಪರ ಕೈ ಮುಗಿದು ನಮಸ್ಕಾರ ಮಾಡಿದ್ದು ಎಲ್ಲರ ಗಮನ ಸೆಳೆದಿತ್ತು. ಈ ಬಗ್ಗೆ ಕಾಮೆಂಟ್ ಮಾಡಿದ್ದ ಯತ್ನಾಳ್ ಎದುರಿಗೆ ಕೈ ಮುಗಿಯುತ್ತಾರೆ, ಒಳಗೊಳಗೆ ಏನಿದೆಯೋ ಯಾರಿಗೆ ಗೊತ್ತು ಎಂದು ಟಾಂಗ್ ಕೊಟ್ಟಿದ್ದರು.

ಇದೀಗ ದಾವಣಗೆರೆಯಲ್ಲಿ ವಿಜಯೇಂದ್ರ ಬಣ ನಡೆಸಲು ಉದ್ದೇಶಿಸಿರುವ ಸಮಾವೇಶಕ್ಕೆ ಪ್ರತಿಯಾಗಿ ಯತ್ನಾಳ್ ಬಣ ಕೂಡಾ ಸಭೆ ನಡೆಸಲು ಮುಂದಾಗಿರುವುದು ಮತ್ತೆ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್ ಗೆ ವರದಿ ಒಪ್ಪಿಸಲು ವಿಜಯೇಂದ್ರ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಮೊನ್ನೆಯಷ್ಟೇ ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್ ನೀಡಿ ದೆಹಲಿಗೆ ಕರೆಸಿಕೊಂಡು ಬುದ್ಧಿ ಹೇಳಿತ್ತು. ಹಾಗಿದ್ದರೂ ಯತ್ನಾಳ್ ಆಂಡ್ ಟೀಂ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಕಿಡಿ ಕಾರುವುದನ್ನು ಬಿಟ್ಟಿರಲಿಲ್ಲ. ಈಗ ಮತ್ತೆ ವಿಜಯೇಂದ್ರ ದೆಹಲಿಗೆ ದೌಡಾಯಿಸಿದ್ದು ಈ ಬಾರಿ ಯತ್ನಾಳ್ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವ ತೀರ್ಮಾನಕ್ಕೆ ಬರಲಿದೆ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments