Webdunia - Bharat's app for daily news and videos

Install App

ವೋಟ್ ಗಾಗಿ ಟಿಪ್ಪು ಸಂತತಿಯನ್ನು ವೈಭವೀಕರಿಸೋದು ಕಾಂಗ್ರೆಸ್ ಜಾಯಮಾನ: ವಿಜಯೇಂದ್ರ

Krishnaveni K
ಸೋಮವಾರ, 4 ಆಗಸ್ಟ್ 2025 (10:48 IST)
ಬೆಂಗಳೂರು: ಟಿಪ್ಪು ಸಂತತಿಯನ್ನು ವೈಭವೀಕರಿಸಿ ಮುಸ್ಲಿಂ ಮತಗಳಿಕೆಯನ್ನು ಗಟ್ಟಿಗೊಳಿಸಿಕೊಳ್ಳುವುದು ನಿಮ್ಮ ಕಾರ್ಯ ಸೂಚಿ ಎಂಬುದು ನಾಡಿನ ಜನತೆಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಸಚಿವ ಮಹದೇವಪ್ಪ ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ವಿವಾದಿತ ಹೇಳಿಕೆ ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿ ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಮನೆತನದ ಬಗ್ಗೆ ಅಸಡ್ಡೆಯಿಂದ ನಡೆದುಕೊಂಡಿದ್ದಾರೆ, ಮೊನ್ನೆಯಷ್ಟೇ ನಾಲ್ವಡಿ ಅವರಿಗಿಂತಲೂ ತಮ್ಮ ತಂದೆಯೇ ಮಿಗಿಲು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿಕೊಂಡಿದ್ದಾರೆ, ಇದೀಗ ಮುಖ್ಯಮಂತ್ರಿಗಳ ಹಿಂಬಾಲಕ ಸಚಿವ  ಹೆಚ್. ಸಿ. ಮಹದೇವಪ್ಪನವರು ಕನ್ನಂಬಾಡಿ ಕಟ್ಟೆಗೆ ಮೊದಲು ಅಡಿಪಾಯ ಹಾಕಿದ್ದು ಟಿಪ್ಪು ಎಂದು ಹೇಳುವ ಮೂಲಕ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ)ನಿರ್ಮಾಣದ ಹಿಂದಿನ ತ್ಯಾಗ- ಪರಶ್ರಮದ ಇತಿಹಾಸ ಹಾಗೂ ನಾಲ್ವಡಿಯವರ ಕೊಡುಗೆಯನ್ನು ಅಪಮಾನಿಸಿದ್ದಾರೆ.

ಕನ್ನಂಬಾಡಿ ಕಟ್ಟೆಗೆ (ಕೃಷ್ಣರಾಜ ಸಾಗರ) ರೋಚಕ ಇತಿಹಾಸವಿದೆ, ತ್ಯಾಗ ಮೆರೆದ ಹೆಗ್ಗಳಿಕೆ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕನಸು ಹಾಗೂ ಪರಿಶ್ರಮದ ಫಲವೇ ಕನ್ನಂಬಾಡಿ ಕಟ್ಟೆ (ಕೃಷ್ಣರಾಜ ಸಾಗರ) ನಿರ್ಮಾಣವಾಯಿತು ಎಂಬುದಕ್ಕೆ ಐತಿಹಾಸಿಕ ದಾಖಲೆಗಳಿವೆ, ತ್ಯಾಗ, ಕೊಡುಗೆಗಳ ಹೆಗ್ಗಳಿಕೆಯಿದೆ. 1908 ರಲ್ಲಿ ರೂಪಿಸಲಾದ ಯೋಜನೆಯನ್ನು ಮತ್ತಷ್ಟು ಪರಿವರ್ತಿಸಿ ಹತ್ತು ಹಲವು ಅಡ್ಡಿ ಆತಂಕ ತೊಂದರೆ ಅವಮಾನಗಳ ನಡುವೆ ಬ್ರಿಟಿಷ್ ಆಡಳಿತದಿಂದ ಅನುಮತಿ ಪಡೆದುಕೊಂಡ ಹಿನ್ನೆಲೆಯ ಪ್ರತಿ ಹೆಜ್ಜೆಗಳಿಗೂ ಪುಟ ಪುಟಗಳ ದಾಖಲೆಗಳು ಇಂದಿಗೂ ಜೀವಂತವಾಗಿವೆ.

1911 ರಿಂದ ಅಧಿಕೃತವಾಗಿ ಆರಂಭವಾದ ಯೋಜನೆ 1932ರಲ್ಲಿ ಪೂರ್ಣಗೊಂಡಿದ್ದಕ್ಕೆ ಎಷ್ಟು ವೆಚ್ಚವಾಯಿತು, ಯೋಜನೆ ಪೂರ್ಣಗೊಳ್ಳಲು ಆರ್ಥಿಕ ಸಂಕಷ್ಟ ಎದುರಾದಾಗ ನಾಲ್ವಡಿ ಅವರ ಮಾತೆ ವಾಣಿವಿಲಾಸ ಸನ್ನಿಧಾನ (ಕೆಂಪರಾಜಮ್ಮಣ್ಣಿ)  ಹಾಗೂ ಅವರ ಪತ್ನಿ ಕೃಷ್ಣ ವಿಲಾಸ ಸನ್ನಿಧಾನ ಅವರು ಲಕ್ಷಾಂತರ ಜನರಿಗೆ ಅನ್ನ ನೀಡುವ ಯೋಜನೆ ಪೂರ್ಣಗೊಳ್ಳುವುದಕ್ಕಿಂತ ಖಜಾನೆಯಲ್ಲಿರುವ ವಜ್ರ, ವೈಢೂರ್ಯಗಳು ಹೆಚ್ಚಿನದ್ದಲ್ಲ ಎಂಬ ತ್ಯಾಗ ಮನೋಭಾವ ಪ್ರದರ್ಶಿಸಿ ತಮ್ಮ ಸ್ವಂತ ಒಡವೆಗಳನ್ನು ಮಾರಾಟ ಮಾಡಿ ಕನ್ನಂಬಾಡಿ ಕಟ್ಟೆ ಕಟ್ಟಿಸಿದ್ದಕ್ಕೆ ಐತಿಹಾಸಿಕ ತ್ಯಾಗ ಮೆರೆದ ಆನಂದ ಭಾಷ್ಪತರಿಸುವ ಕಥೆ ಮೈಸೂರು ಸಂಸ್ಥಾನದ ಪ್ರತಿ ಮನೆ,ಮನೆಯಲ್ಲೂ ಇಂದಿಗೂ ನಿತ್ಯ ನೆನಪಿನ ಸ್ಮರಣೆಯಾಗಿ ಉಳಿದಿದೆ.

ಅಣೆಕಟ್ಟೆ ನಿರ್ಮಾಣಕ್ಕಾಗಿ ಸರ್.ಎಂ ವಿಶ್ವೇಶ್ವರಯ್ಯನವರ ವಿಶೇಷ ಕಾಳಜಿ ಹಾಗೂ ಪರಿಶ್ರಮ ಸೇರಿದಂತೆ ನೂರಾರು ಮಹನೀಯರ ಪರಿಶ್ರಮದ ಬೆವರಿನ ಕಥೆಯಿದೆ. ಅಂತಹ ಚಾರಿತ್ರಿಕ ಅಣೆಕಟ್ಟೆ ನಿರ್ಮಾಣವೂ ಸೇರಿದಂತೆ ನೂರಾರು ಜನಕಲ್ಯಾಣ ಕೈಗೊಂಡ ಕಾರಣಕ್ಕಾಗಿ ಮಹಾತ್ಮ ಗಾಂಧಿ ಅವರಿಂದ 'ರಾಜಋಷಿ’ಎಂದು ಕರೆಸಿಕೊಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ಕನ್ನಂಬಾಡಿ ಕಟ್ಟೆಗೆ ಇಡಲಾಗಿದೆ.

ಮಾನ್ಯ ಹೆಚ್.ಸಿ. ಮಹಾದೇವಪ್ಪನವರೇ, ಟಿಪ್ಪು ಸುಲ್ತಾನ್ ಕೆಆರ್‌ಎಸ್‌ ಅಣೆಕಟ್ಟು ಕಟ್ಟಲು ಪ್ರಯತ್ನಿಸಿದ್ದ ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಿ, ಕನ್ನಂಬಾಡಿ ಕಟ್ಟೆ ನಿರ್ಮಾಣ ಹಂತದ ಪ್ರತಿ ಹೆಜ್ಜೆಯ ಇತಿಹಾಸದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ, ಟಿಪ್ಪು ಪರಿಶ್ರಮದ ಬಗ್ಗೆ ನಿಮ್ಮಲ್ಲಿ ಯಾವುದಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಿ, ಟಿಪ್ಪು ನಿಧನವಾಗಿದ್ದು 1799 ರಲ್ಲಿ ಕನ್ನಂಬಾಡಿ ಕಟ್ಟುವ ಯೋಜನೆ ಪ್ರಾರಂಭಿಸಿದ್ದು 1908 ರಲ್ಲಿ, (ಅಂದರೆ ಶತಮಾನಗಳ ಅಂತರದಲ್ಲಿ ) ನಾಲಿಗೆ ಹೊರಳುತ್ತದೆ ಎಂದು ಇತಿಹಾಸದ ಪುಟಗಳನ್ನು ಗಲೀಜು ಮಾಡಲು ಹೋಗಬೇಡಿ, ಇಡೀ ದೇಶದಲ್ಲೇ ಅತ್ಯಂತ ಶ್ರೇಷ್ಠ ಆಡಳಿತ ನೀಡಿ ವಿಶ್ವಮಾನ್ಯರಾದ ಮೈಸೂರು ರಾಜವಂಶಸ್ಥರು ಅದರಲ್ಲೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಚರಿತ್ರೆಯನ್ನು ಸಾಧ್ಯವಾದರೆ ಗೌರವಿಸಿ, ಅಪಮಾನಿಸಿ ಜನರಿಂದ  ಛೀಮಾರಿ ಹಾಕಿಸಿಕೊಳ್ಳಬೇಡಿ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಧಾಮೂರ್ತಿ ಹೇಳುವ ಈ ಮೂರು ಜೀವನಪಾಠವನ್ನು ತಪ್ಪದೇ ಪಾಲಿಸಿ

ಕೆಆರ್ ಎಸ್ ಡ್ಯಾಮ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂದ ಸಚಿವ ಮಹದೇವಪ್ಪ: ಅಂಕಿ ಅಂಶ ಏನು ಹೇಳುತ್ತದೆ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಮುಂದಿನ ಸುದ್ದಿ
Show comments