Webdunia - Bharat's app for daily news and videos

Install App

ರಾಜ್ಯಾಧ್ಯಕ್ಷ ಬದಲಾವಣೆ ಸುದ್ದಿ ಬೆನ್ನಲ್ಲೇ ಅಮಿತ್ ಶಾ ಜೊತೆ ಬಿವೈ ವಿಜಯೇಂದ್ರ ಲಾಬಿ

Krishnaveni K
ಗುರುವಾರ, 2 ಜನವರಿ 2025 (10:33 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಬದಲಾವಣೆ ಸುದ್ದಿ ಬೆನ್ನಲ್ಲೇ ಬಿವೈ ವಿಜಯೇಂದ್ರ ದೆಹಲಿಯಲ್ಲಿ ಗೃಹಸಚಿವ ಅಮಿತ್ ಶಾ ಮುಂದೆ ಲಾಬಿ ಮಾಡಿಕೊಂಡು ಬಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಅವಧಿ ಸದ್ಯದಲ್ಲೇ ಮುಕ್ತಾಯವಾಗಲಿದೆ. ಇದಾದ ಬಳಿಕ ರಾಜ್ಯಾಧ್ಯಕ್ಷರನ್ನಾಗಿ ಬೇರೆಯವರನ್ನು ಆಯ್ಕೆ ಮಾಡಲು ಬಸನಗೌಡ ಪಾಟೀಲ್ ಯತ್ನಾಳ್ ಬಣ ಪಟ್ಟು ಹಿಡಿದಿದೆ. ಹೀಗಾಗಿ ವಿಜಯೇಂದ್ರ ದೆಹಲಿಗೇ ತೆರಳಿ ಅಮಿತ್ ಶಾ ಮುಂದೆ ಮಾತುಕತೆ ನಡೆಸಿದ್ದಾರೆ.

ಅಮಿತ್ ಶಾ ಭೇಟಿ ವೇಳೆ ಬಸನಗೌಟ ಪಾಟೀಲ್ ಯತ್ನಾಳ್ ಬಣದ ವಿರುದ್ಧ ವಿಜಯೇಂದ್ರ ದೂರಿನ ಸುರಿಮಳೆಯನ್ನೇ ಸುರಿಸಿದ್ದಾರೆ ಎನ್ನಲಾಗಿದೆ. ಯತ್ನಾಳ್ ಬಣದ ಪ್ರತ್ಯೇಕ ಸಭೆ, ಬಹಿರಂಗ ಹೇಳಿಕೆಗಳ ಬಗ್ಗೆ ಅಮಿತ್ ಶಾಗೆ ದೂರು ನೀಡಿದ್ದಾರೆ. ಈ ಮೂಲಕ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ವಿಜಯೇಂದ್ರ ಅಡಿಪಾಯ ಹಾಕಿ ಬಂದಿದ್ದಾರೆ.

ಇನ್ನೊಂದೆಡೆ ರಾಜ್ಯದಲ್ಲಿ ಇತ್ತೀಚೆಗೆ ನಡೆಸಿದ ಸದಸ್ಯತ್ವ ಅಭಿಯಾನ, ರಾಜ್ಯ ಸರ್ಕಾರದ ವಿರುದ್ಧದ ಹೋರಾಟದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಇದೀಗ ಮುಂದಿನ ಅಧ್ಯಕ್ಷರಾಗಿ ವಿಜಯೇಂದ್ರರನ್ನೇ ಮುಂದುವರಿಸುತ್ತಾರಾ, ಒಂದು ವೇಳೆ ಮುಂದುವರಿಸಿದರೆ ವಿರೋಧಿ ಬಣದ ಅಸಮಾಧಾನವನ್ನು ಹೇಗೆ ಶಮನ ಮಾಡಬಹುದು ಎಂಬ ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments