ಉಪಚುನಾವಣೆ ಫಲಿತಾಂಶ ಬಂದ ಮೇಲೆ ಬಿವೈ ವಿಜಯೇಂದ್ರಗೆ ಕೊಕ್

Krishnaveni K
ಮಂಗಳವಾರ, 12 ನವೆಂಬರ್ 2024 (08:47 IST)
ಬೆಂಗಳೂರು: ಕರ್ನಾಟಕ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಕೇವಲ ಆಡಳಿತಾರೂಢ ಕಾಂಗ್ರೆಸ್ ಮಾತ್ರವಲ್ಲ, ಪ್ರತಿಪಕ್ಷ ಬಿಜೆಪಿ ನಾಯಕರಿಗೂ ನಿರ್ಣಾಯಕ. ಈ ಉಪಚುನಾವಣೆಯಲ್ಲಿ ಬಿಜೆಪಿ ಸೋತರೆ ಬಿವೈ ವಿಜಯೇಂದ್ರ ಸ್ಥಾನಕ್ಕೆ ಕುತ್ತು ಬರಬಹುದು.

ಈಗಾಗಲೇ ರಾಜ್ಯ ಬಿಜೆಪಿ ಎರಡು ಬಣವಾಗಿದೆ. ಒಂದು ವಿಜಯೇಂದ್ರ ಬಣವಾದರೆ ಇನ್ನೊಂದು ಬಸನಗೌಡ ಪಾಟೀಲ್, ರಮೇಶ್ ಜಾರಕಿಹೊಳಿ ಬಣ. ರಮೇಶ್ ಜಾರಕಿಹೊಳಿ, ಯತ್ನಾಳ್ ಈಗಾಗಲೇ ವಿಜಯೇಂದ್ರ ನಾಯಕತ್ವದ ಬಗ್ಗೆ ಕೆಂಡ ಕಾರುತ್ತಲೇ ಇದ್ದಾರೆ. ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜೊತೆಗೆ ಬಹಿರಂಗವಾಗಿಯೇ ಬಿವೈ ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಸಾವಿರಾರು ಕೋಟಿ ರೂ. ಹಗರಣದ ಆರೋಪ ಮಾಡಿದ್ದಾರೆ. ಹೀಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಸೋತರೆ ರಾಜ್ಯಾಧ್ಯಕ್ಷ ಪಟ್ಟದಿಂದ ವಿಜಯೇಂದ್ರ ಕೊಕ್ ನೀಡುವ ಕೂಗು ಮತ್ತಷ್ಟು ಬಲವಾಗಲಿದೆ.

ಈಗಾಗಲೇ ರಮೇಶ್ ಜಾರಕಿಹೊಳಿ ಉಪಚುನಾವಣೆ ಬಳಿಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಹೀಗಾಗಿ ಬಿಜೆಪಿ ಸೋತರೆ ಈ ನಾಯಕರು ವಿಜಯೇಂದ್ರ ಬದಲಾವಣೆಗೆ ಹೈಕಮಾಂಡ್ ಮಟ್ಟದಲ್ಲಿ ಒತ್ತಾಯ ಮಾಡುವುದಂತೂ ನಿಜ. ಹೀಗಾಗಿ ಈ ಉಪಚುನಾವಣೆ ವಿಜಯೇಂದ್ರ ಪಾಲಿಗೆ ನಿರ್ಣಾಯಕವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments