Webdunia - Bharat's app for daily news and videos

Install App

ಮುಸ್ಲಿಮರಿಗೆ ಮಾತ್ರ ಹಣ ಇಟ್ಟಿದ್ದೀರಿ, ಹಿಂದೂಗಳು ಜನರಲ್ಲವೇ

Krishnaveni K
ಶನಿವಾರ, 8 ಮಾರ್ಚ್ 2025 (14:50 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೂಗಳು- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಇವರು ಕೈ ಹಾಕಿದ್ದಾರೆ. ಮದರಸಾಕ್ಕೆ ಹಣ ಕೊಟ್ಟಿದ್ದಾರೆ. ಮೌಲ್ವಿಗಳ ಹಣ ಹೆಚ್ಚಿಸಿದ್ದಾರೆ. ಮದುವೆಗೆ 50 ಸಾವಿರ ನೀಡಿದ್ದಾರೆ. ಹಾಗಿದ್ದರೆ ಹಿಂದೂಗಳಲ್ಲಿ ಬಡವರಿಲ್ಲವೇ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳಿಗೆ ಯಾಕೆ ಈ ದುರ್ಬುದ್ಧಿ ಎಂದು ಪ್ರತಿಯೊಬ್ಬರೂ ಈ ರಾಜ್ಯದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ಬಜೆಟ್ಟನ್ನು ಸಿದ್ದರಾಮಯ್ಯನವರು ಮಂಡಿಸಿಲ್ಲ; ಜಮೀರ್ ಅಹ್ಮದ್ ಖಾನ್ ಅವರೇ ಮಂಡಿಸಿದರೇ ಎಂಬ ಅನುಮಾನ ನನಗಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ಕೊನೆಯ ಬಜೆಟ್ ಮಂಡಿಸಿದ್ದಾರೆ; ಇದು ತೀರಾ ನಿರಾಶಾದಾಯಕ ಎಂದು ಹೇಳಿದರು.

ಈ ಬಜೆಟ್ನಿಂದ ರಾಜ್ಯದ ಕೃಷಿಕರು, ಕೃಷಿ ಕ್ಷೇತ್ರ, ಯುವಕರು, ಮಹಿಳೆಯರು, ಬಡವರಿಗೆ ಯಾವುದೇ ಅನುಕೂಲ ಆಗಲಾರದು. ಇದು ಅಭಿವೃದ್ಧಿಗೆ ಪೂರಕವಲ್ಲ ಎಂದರು. ಸಿದ್ದರಾಮಯ್ಯನªರಿಗೆ ಅಲ್ಪಸಂಖ್ಯಾತರ ಬಗೆಗಿನ ಪ್ರೀತಿ, ಕಾಳಜಿ ಎಲ್ಲರಿಗೂ ಗೊತ್ತಿದೆ. ಆದರೆ, ಹಣಕಾಸಿನ ಸಚಿವರಾಗಿ ಅವರು ಈ ಮಟ್ಟಕ್ಕೆ ಇಳಿಯುವರೆಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹೊರದೇಶಕ್ಕೆ ಹೋಗಲು ಕೊಡುವ ಮೊತ್ತವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಏರಿಸಿದ್ದಾರೆ. ಯಾಕೆ ಹಿಂದೂಗಳಲ್ಲಿ ಯಾರಿಗೂ ಕೊಡಬೇಕೆಂದು ನಿಮಗೆ ಅನಿಸಲಿಲ್ಲವೇ ಸಿದ್ದರಾಮಯ್ಯನವರೇ ಎಂದು ಕೇಳಿದರು.

ಸ್ವರಕ್ಷಣಾ ಕಲೆ ತರಬೇತಿಗೆ ಮುಸ್ಲಿಂ ಮಹಿಳೆಯರಿಗೆ ಹಣ ಮೀಸಲಿಟ್ಟಿದ್ದಾರೆ. ಯಾಕೆ ಸಿದ್ದರಾಮಯ್ಯನವರೇ, ಹಿಂದೂಗಳಲ್ಲಿರುವ ಮಹಿಳೆಯರಿಗೆ ಆತ್ಮಸ್ಥೈರ್ಯ ಕೊಡುವ ಸ್ವರಕ್ಷಣಾ ಕಲೆ ತರಬೇತಿ ಪಡೆಯಲು ಯೋಜನೆ ಕೊಡಬೇಕೆಂದು ಅನಿಸಿಲ್ಲ ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಬಜೆಟ್ ಮಂಡಿಸಿಲ್ಲ ಎಂಬುದನ್ನು ಬಿಟ್ಟರೆ, ಇನ್ನೆಲ್ಲ ಅಂಶಗಳು ಈ ಬಜೆಟ್‍ನಲ್ಲಿವೆ ಎಂದು ಟೀಕಿಸಿದರು. ಮದುವೆಗೆ 50 ಸಾವಿರ; ಹಿಂದೂಗಳಲ್ಲಿ ಬಡವರಿಲ್ಲವೇ ಹಾಗಿದ್ದರೆ ಎಂದು ಕೇಳಿದರು.
ಪರಿಶಿಷ್ಟರಿಗೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ 25 ಸಾವಿರ ಕೋಟಿಯನ್ನು ಬೇರೆ ಬೇರೆ ಕಾರ್ಯಕ್ಕೆ ವರ್ಗಾವಣೆ ಮಾಡಿದ್ದಾರೆ. ಸಾಲ 1 ಲಕ್ಷ 16 ಸಾವಿರ ಕೋಟಿಗೆ ಏರಿದೆ. ಮೊದಲ ಬಜೆಟ್‍ನಲ್ಲಿ ಮಿಗತೆ ಆಯವ್ಯಯ ಪತ್ರ ಕೊಟ್ಟಿದ್ದ ಸಿದ್ದರಾಮಯ್ಯನವರು ತಮ್ಮ ಅಂತಿಮ ಬಜೆಟ್ ವೇಳೆ ಬೃಹತ್ ಪ್ರಮಾಣದ ಸಾಲ ಮಾಡಿದ್ದಾರೆ ಎಂದು ಟೀಕಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments