Webdunia - Bharat's app for daily news and videos

Install App

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

Krishnaveni K
ಮಂಗಳವಾರ, 29 ಜುಲೈ 2025 (17:34 IST)
ತುಮಕೂರು: ರಾಜ್ಯ ಸರಕಾರದ ಕೃಷಿ ಸಚಿವರ ಅವಿವೇಕತನದಿಂದ ರೈತರು ರಸಗೊಬ್ಬರಕ್ಕಾಗಿ ಹೋರಾಟ ಮಾಡುವ ಸ್ಥಿತಿ ಬಂದಿದೆ. ರೈತಪರವಾಗಿ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
 
ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಇಂದು ಇಲ್ಲಿ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ರೈತರ ಕಣ್ಣೀರು ಒರೆಸಲು ಈ ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.
 
ರೈತರ ಕಣ್ಣೀರು ಒರೆಸದ ಸರಕಾರಕ್ಕೆ ರಾಜ್ಯದಲ್ಲಿ ಉಳಿದಿಲ್ಲ ಎಂದು ಅವರು ಎಚ್ಚರಿಸಿದರು. ರೈತರ ಕಣ್ಣಲ್ಲಿ ನೀರು ಬರಿಸಿದರೆ ಆ ಮುಖ್ಯಮಂತ್ರಿಗಳಿಗೆ ಒಳ್ಳೆಯದಾಗಿಲ್ಲ. ರೈತರನ್ನು ದುಸ್ಥಿತಿಗೆ ತಂದ ಕೃಷಿ ಸಚಿವರಿಗೂ ಒಳ್ಳೆಯದಾಗದು ಎಂದು ನುಡಿದರು. ಹವಾಮಾನ ಇಲಾಖೆಯಿಂದ ಸಾಕಷ್ಟು ಮಳೆಯ ಮುನ್ಸೂಚನೆ ಇದ್ದರೂ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದರು ಎಂದು ಟೀಕಿಸಿದರು.
 
ರಾಹುಲ್, ಸೋನಿಯಾ ಮನೆ ಗೇಟ್ ಬಳಿ ಕಾಯುವ ಸಿಎಂ, ಡಿಸಿಎಂ
 
ಕೃಷಿ ಸಚಿವರೂ ಎಲ್ಲ ಜಿಲ್ಲೆಗಳಿಗೆ ಹೋಗಿ ವಾಸ್ತವಿಕ ಪರಿಸ್ಥಿತಿ ಅರ್ಥ ಮಾಡಿಕೊಂಡಿಲ್ಲ. ಮುಖ್ಯಮಂತ್ರಿಗಳೂ ಜಿಲ್ಲಾಧಿಕಾರಿಗಳ ಜೊತೆ ಸಮಗ್ರ ಚರ್ಚೆ ಮಾಡಿಲ್ಲ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ತಿಂಗಳಿಗೆ 4 ಬಾರಿ ದೆಹಲಿಗೆ ಹೋಗಿ ಕುಳಿತುಕೊಳ್ಳುತ್ತಾರೆ. ಪ್ರಧಾನಮಂತ್ರಿ ಮೋದಿಜೀ, ಸಂಬಂಧಿತ ಸಚಿವರನ್ನು ಭೇಟಿ ಮಾಡದೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರ ಮನೆಯ ಗೇಟ್ ಬಳಿ ಕಾಯುತ್ತಿರುತ್ತಾರೆ ಎಂದು ಟೀಕಿಸಿದರು. ಪ್ರತಿ ತಿಂಗಳಿಗೆ 4 ಬಾರಿ ದೆಹಲಿಗೆ ಹೋಗಿ ಕುಳಿತುಕೊಂಡರೆ ರಾಜ್ಯದ ಆಡಳಿತ ನಡೆಸುವವರು ಯಾರು ಎಂದು ಕೇಳಿದರು. ರೈತ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ರೈತರ ಕಣ್ಣೊರೆಸಲು ಸದಾ ಮುಂದಾದವರು ಎಂದು ವಿವರಿಸಿದರು.

ಮಾಜಿ ಸಚಿವ ಹರತಾಳು ಹಾಲಪ್ಪ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಶಾಸಕರಾದ ಸುರೇಶ್ ಗೌಡ, ಜಿ.ಬಿ. ಜ್ಯೋತಿಗಣೇಶ್, ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ, ಮಾಜಿ ಶಾಸಕ ಜಯರಾಮ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ರಾಜ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಂಬಿಕಾ ಹುಲಿನಾಯ್ಕರ್ ಮತ್ತು ಪ್ರಮುಖರು ಭಾಗವಹಿಸಿದ್ದರು. 
ಪಕ್ಷದ ಮುಖಂಡರು ಮಾತನಾಡಿ, ಇದು ರೈತ ವಿರೋಧಿ ಸರಕಾರ. ಹಗರಣಗಳ ಸರಕಾರ ಎಂದು ಟೀಕಿಸಿದರು.ರೈತರ ಕುರಿತು ಜವಾಬ್ದಾರಿಯಿಂದ ಮಾತನಾಡದೆ ಕೇಂದ್ರವನ್ನು ದೂಷಿಸಿದರೆ ಒಳ್ಳೆಯದಾಗದು ಎಂದು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು.
 
ತುಮಕೂರು ಬಿ.ಜಿ.ಎಸ್. ವೃತ್ತದ ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಜನರು, ರೈತರು, ಕಾರ್ಯಕರ್ತರು ಭಾಗವಹಿಸಿದ್ದರು. ಕೇಂದ್ರ ಸರಕಾರವು ಸಮರ್ಪಕವಾಗಿ ರಸಗೊಬ್ಬರ ನೀಡಿದ್ದರೂ ಅದನ್ನು ರೈತರಿಗೆ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಮುಖಂಡರು ಆಕ್ಷೇಪಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments