Webdunia - Bharat's app for daily news and videos

Install App

ನನ್ನ ಬಗ್ಗೆ ಏನು ಬೇಕಾದ್ರೂ ಹೇಳಲಿ, ತಂದೆ ಬಗ್ಗೆ ಹೇಳಬೇಡಿ: ಬಿವೈ ವಿಜಯೇಂದ್ರ

Krishnaveni K
ಗುರುವಾರ, 6 ಫೆಬ್ರವರಿ 2025 (13:41 IST)
ಬೆಂಗಳೂರು: ನನ್ನ ಬಗ್ಗೆ ಏನು ಬೇಕಾದರೂ ಹೇಳಲಿ, ನಮ್ಮ ತಂದೆ ಯಡಿಯೂರಪ್ಪನವರ ಬಗ್ಗೆ ಮಾತನಾಡಬೇಡಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಯುದ್ಧದ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಬಿವೈ ವಿಜಯೇಂದ್ರ ವಿರೋಧಿ ಬಣದವರಿಗೆ ಎಚ್ಚರಿಕೆ ನೀಡಿದ್ದಾರೆ. ಶ್ರೀರಾಮುಲು, ಯತ್ನಾಳ್ ಸೇರಿ ರೆಬೆಲ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಬಿ ಶ್ರೀರಾಮುಲು ನಿನ್ನೆ ವಿಜಯೇಂದ್ರಗೆ ಹೆಚ್ಚು ಅನುಭವವಿಲ್ಲ ಎಂದಿದ್ದರು. ಅದಕ್ಕೆ ತಿರುಗೇಟು ನೀಡಿದ ವಿಜಯೇಂದ್ರ, ‘ರಾಜ್ಯದಲ್ಲಿ ನನ್ನ ಕಾರ್ಯವೈಖರಿ ಬಗ್ಗೆ ಕಾರ್ಯಕರ್ತರಲ್ಲಿ ಮೆಚ್ಚುಗೆಯಿದೆ. ಹೇಳಿಕೆ ಕೊಡುತ್ತಾ ಹೋದರೆ ನಾನೂ ಹೇಳುತ್ತಾ ಹೋಗಬಹುದು. ಆದರೆ ರಾಜ್ಯಾಧ್ಯಕ್ಷನಾಗಿ ನಾನು ಬಹಿರಂಗ ಹೇಳಿಕೆ ಕೊಡುತ್ತಾ ಹೋಗುವುದು ಸರಿಯಲ್ಲ ಎಂದು ಸುಮ್ಮನಿದ್ದೇನೆ.

ಹಿರಿಯ ನಾಯಕ ಶ್ರೀರಾಮುಲು ಅವರು ನಾನು ಹೊಸಬ ಎಂದಿದ್ದಾರೆ. ರಾಜ್ಯಾಧ್ಯಕ್ಷನಾಗಿ ನನಗೆ ಅನುಭವವಿಲ್ಲದೇ ಇರಬಹುದು. ಆದರೆ ಕಾರ್ಯಕರ್ತರಿಗೆ ನಂಬಿಕೆಯಿದೆ, ನನ್ನ ಕೆಲಸದ ಬಗ್ಗೆ ನನಗೆ ತೃಪ್ತಿಯಿದೆ’ ಎಂದಿದ್ದಾರೆ.

ಒಂದು ದುಃಖದ ಸಂಗತಿ ಎಂದರೆ ವಿಜಯೇಂದ್ರ ಬಗ್ಗೆ ಏನು ಬೇಕಾದರೂ ಹೇಳಲಿ ಸಹಿಸಿಕೊಳ್ಳುತ್ತೇನೆ. ಆದರೆ ಪಕ್ಷ ಕಟ್ಟಿರುವ ಹೋರಾಟಗಾರ, ರೈತ ನಾಯಕ ಯಡಿಯೂರಪ್ಪನವರ ಬಗ್ಗೆ ಮಾತನಾಡುವಾಗಲೂ ಎಂಥಾ ಕೀಳುಮಟ್ಟದ ಭಾಷೆ ಬಳಸುತ್ತಿದ್ದಾರೆ. ಇದನ್ನು ನೋಡಿಕೊಂಡು ಸುಮ್ಮನಿರುವುದೂ ಅಪರಾಧ. ಕಳೆದ ಒಂದು ವರ್ಷದಿಂದ ಯಡಿಯೂರಪ್ಪನವರಿಗೆ ಅವಮಾನ ಮಾಡುವ ಕೆಲಸ ಮಾಡಲಾಗುತ್ತಿದೆ. ಅಂತಹವರಿಗೆ ಯಾರೂ ಇಂತಹ ಹೇಳಿಕೆ ಕೊಡಬೇಡಿ ಎಂದು ಹೇಳುವವರಿಲ್ಲ ಎನ್ನುವುದೇ ದುರ್ದೈವ’ ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಮುಂದಿನ ಸುದ್ದಿ
Show comments