Webdunia - Bharat's app for daily news and videos

Install App

ಹಗರಣಗಳಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಸಿದ್ದರಾಮಯ್ಯನವರೇ: ಬಿವೈ ವಿಜಯೇಂದ್ರ ವಾಗ್ದಾಳಿ

Krishnaveni K
ಶುಕ್ರವಾರ, 12 ಜುಲೈ 2024 (15:54 IST)
ಬೆಂಗಳೂರು: ಮುಖ್ಯಮಂತ್ರಿಗಳು ಮೈಸೂರು ‘ಮುಡಾ’ ಹಗರಣದಲ್ಲಿ ಸತ್ಯಾಂಶವನ್ನು ಮರೆಮಾಚಲು ಸಾಧ್ಯವಿಲ್ಲ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಬಿಡದಿಯ ಬಳಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಈ ಹಗರಣದಿಂದ ನೀವು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಮುಖ್ಯಮಂತ್ರಿಗಳೇ ಎಂದ ಅವರು, ಇವತ್ತಲ್ಲ ನಾಳೆ ನೀವು ಸಿಬಿಐ ತನಿಖೆಗೆ ಕೊಡಬೇಕಾಗುತ್ತದೆ. ಬಿಜೆಪಿಯ ಶಾಂತಿಯುತ ಹೋರಾಟಕ್ಕೆ ಕಲ್ಲು ಹಾಕುವ ಕೆಲಸ ಮಾಡಲಾಗಿದೆ. ನಾವಾಗಲೀ, ನಮ್ಮ ಕಾರ್ಯಕರ್ತರಾಗಲೀ ಯಾವುದೇ ಕಾರಣಕ್ಕೂ ಇದರಿಂದ ಹೆದರಿಕೊಂಡು ಓಡುವ ಪ್ರಶ್ನೆಯೇ ಇಲ್ಲ. ಈ ಹೋರಾಟಕ್ಕೆ ಉತ್ತರ ಸಿಗಲೇಬೇಕು ಎಂದು ತಿಳಿಸಿದರು.
ಬಡವರಿಗೆ ಅನ್ಯಾಯ ಆಗಿದೆ. ನ್ಯಾಯ ಸಿಗಲೇ ಬೇಕಿದೆ. ಭ್ರಷ್ಟಾಚಾರದ ವಿಚಾರ ಸ್ಪಷ್ಟವಾಗಲೇಬೇಕಿದೆ.

ಎಲ್ಲಿಯವರೆಗೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಕೊಡುವುದಿಲ್ಲವೋ, ಸಿಎಂ ರಾಜೀನಾಮೆ ಕೊಡುವುದಿಲ್ಲವೋ ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಸಿದರು.
ಸದನದ ಒಳಗೆ ಕೂಡ ಈ ಕುರಿತು ಪ್ರಶ್ನಿಸುತ್ತೇವೆ. ಮುಖ್ಯಮಂತ್ರಿಗಳಿಗೆ ನೈತಿಕತೆ ಇದ್ದರೆ, ಪ್ರಾಮಾಣಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಸಚಿವರಾದ ಮುನಿರತ್ನ, ಶಾಸಕರಾದ ಕೃಷ್ಣಪ್ಪ, ಧೀರಜ್ ಮುನಿರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ರಮೇಶ್ ಗೌಡ, ಶರಣು ತಲ್ಲಿಕೆರೆ, ಮುನಿರಾಜು, ಜಿಲ್ಲಾಧ್ಯಕ್ಷರಾದ ಹರೀಶ್ ಸಪ್ತಗಿರಿಗೌಡ ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments