Webdunia - Bharat's app for daily news and videos

Install App

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

Krishnaveni K
ಸೋಮವಾರ, 18 ಆಗಸ್ಟ್ 2025 (20:10 IST)
ಬೆಂಗಳೂರು: ಕೊಪ್ಪಳ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ- ಸುವ್ಯವಸ್ಥೆ ಕದಡಿದರೆ ಅದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ವಿಜಯೇಂದ್ರ ಅವರು, ಕೆಲವು ದಿನಗಳ ಹಿಂದೆ ಹಿಂದೂ ಕಾರ್ಯಕರ್ತ ಕೊಪ್ಪಳದ ಗವಿಸಿದ್ದಪ್ಪ ನಾಯಕರ ಆಗಿತ್ತು. ಆ ಹತ್ಯೆಯ ನಂತರದಲ್ಲಿ ಅನೇಕ ಘಟನಾವಳಿಗಳು ನಡೆದಿದ್ದವು ಎಂದು ವಿವರಿಸಿದರು. ರಾಜ್ಯ ಸರಕಾರ ಮತ್ತು ಕೆಲವು ಮುಖಂಡರು ಎಂಥ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದರೆ, ಗವಿಸಿದ್ದಪ್ಪ ನಾಯಕರ ಕುಟುಂಬಕ್ಕೆ ನ್ಯಾಯ ಕೊಡುವ ಬದಲಾಗಿ ಗವಿಸಿದ್ದಪ್ಪ ನಾಯಕರ ತಂದೆ, ತಾಯಿ, ಅಕ್ಕ, ತಂಗಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದು ದುರ್ದೈವ ಎಂದು ಟೀಕಿಸಿದರು.

ಇಂಥ ನೀಚಮಟ್ಟಕ್ಕೆ ಈ ವ್ಯವಸ್ಥೆ- ರಾಜಕಾರಣಿಗಳು ಇಳಿಯುತ್ತಾರೆ ಎಂದು ಆಕ್ಷೇಪಿಸಿದರು. ಇಂಥ ಬರ್ಬರ ಹತ್ಯೆ ಆದರೂ ಕೊಪ್ಪಳ ಜಿಲ್ಲೆ- ಅಲ್ಲಿನ ಜನರು ಇವತ್ತು ಶಾಂತಿಯುತವಾಗಿ ಇದ್ದಾರೆ. ಬಡ ಕುಟುಂಬದ ವಿರುದ್ಧ ಎಫ್‍ಐಆರ್ ದಾಖಲಿಸುವ ಷಡ್ಯಂತ್ರ ಏನಿದೆಯೋ ಜನರು ಬೀದಿಗಿಳಿದು ಹೋರಾಡುವ ಪರಿಸ್ಥಿತಿಯನ್ನು ರಾಜ್ಯ ಸರಕಾರವೇ ತಂದಿಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಸರಕಾರದಿಂದ ನ್ಯಾಯಕ್ಕಾಗಿ ಈ ಬಡ ಕುಟುಂಬ, ತಂದೆ, ತಾಯಿ ಕಳೆದ ವಾರ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದವು. ಆ ಕುಟುಂಬಕ್ಕೆ ಸರಕಾರಿ ನೌಕರಿ ಕೊಡಬೇಕು, 50 ಲಕ್ಷ ರೂ. ಪರಿಹಾರ ನೀಡಬೇಕು ಎನ್ನುವ ಅಪೇಕ್ಷೆಯನ್ನು ಅವರು ವ್ಯಕ್ತಪಡಿಸಿದ್ದರು. ನಾವು ಕೂಡ ಸರಕಾರಕ್ಕೆ ಆಗ್ರಹಿಸಿದ್ದೆವು. ಆದರೆ, ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡ ಕುಟುಂಬದ ವಿರುದ್ಧ ಎಫ್‍ಐಆರ್ ದಾಖಲಿಸಿದ್ದು, ಇಂಥ ದುರ್ಬುದ್ಧಿ ಇವರಿಗೆ ಬರುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ತಿಳಿಸಿದರು.

ರಾಜ್ಯ ಸರಕಾರ ಹುಡುಗಾಟಿಕೆ ಮಾಡುವುದನ್ನು ಬಿಟ್ಟು, ಬಡ ಕುಟುಂಬಕ್ಕೆ ನ್ಯಾಯ ಕೊಡಬೇಕು. ಕಾನೂನು - ಸುವ್ಯವಸ್ಥೆ ಏನೇ ಹೆಚ್ಚು ಕಮ್ಮಿ ಆದರೂ ರಾಜ್ಯ ಸರಕಾರ ಜವಾಬ್ದಾರಿ ಹೊರಬೇಕೆಂದು ಆಗ್ರಹಿಸಿದರು. ವಿಧಾನಸಭೆ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್.ಪಾಟೀಲ್, ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಉಪಸ್ಥಿತರಿದ್ದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments