ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

Krishnaveni K
ಗುರುವಾರ, 21 ಆಗಸ್ಟ್ 2025 (15:21 IST)
ಬೆಂಗಳೂರು: ನಮಗೆ ಪೇ ಸಿಎಂ ಅಪಪ್ರಚಾರ ಮಾಡಿದ್ರು ಈಗ ಕಾಂಗ್ರೆಸ್ ಸರ್ಕಾರದ್ದು ಕತೆ ಏನು? ಗುತ್ತಿಗೆದಾರರ ಸಂಕಷ್ಟ ಕೇಳೋರಿಲ್ಲದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಕಾಂಗ್ರೆಸ್ ಆಡಳಿತದಲ್ಲಿ ಗುತ್ತಿಗೆದಾರರ ಸಂಕಷ್ಟ ಹೆಚ್ಚಾಗಿದೆ. ಕಮಿಷನ್ ಶೇ.40 ರನ್ನೂ ಮೀರಿದೆ ಎಂದು ಆರೋಪಿಸಿದ್ದಾರೆ. ಇದರ ಬಗ್ಗೆ ಈಗ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ 'Pay CM' ಹೆಸರಿನಲ್ಲಿ ಅಪಪ್ರಚಾರದ ಮುಂಚೂಣಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ಸಿಗರು ಸರ್ಕಾರದ ಖಜಾನೆಯನ್ನು ಬರಿದುಮಾಡಿ ಕುಳಿತಿದ್ದಾರೆ. ಗುತ್ತಿಗೆದಾರರುಗಳಿಂದ ಕಮಿಷನ್ ವಸೂಲಿ ಮಾಡುವುದರಲ್ಲಿಯೂ ಮುಂಚೂಣಿಯಲ್ಲಿದ್ದಾರೆ. ಈ ಹಿಂದೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಡಿ.ಕೆಂಪಣ್ಣನವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಹೊರಿಸಿದ್ದರು‌, ಸದ್ಯ ಈಗಿನ ಅಧ್ಯಕ್ಷರೂ ಸಹ ಅದೇ ಆರೋಪವನ್ನು ಮಾಡುತ್ತಿದ್ದಾರೆ. ಕಮಿಷನ್ ದಂಧೆ ಮಿತಿಮೀರಿ ಹೋಗಿದೆ ಎಂದು ಗುತ್ತಿಗೆದಾರರು ಹೇಳುತ್ತಿದ್ದಾರೆ.

ಇತ್ತ ಗುತ್ತಿಗೆದಾರರ ಸಂಕಷ್ಟ ಕೇಳುವವರಿಲ್ಲದಂತಾಗಿದ್ದರೆ, ಅತ್ತ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ, ಗುತ್ತಿಗೆದಾರರು ಆರೋಪಿಸುತ್ತಿರುವಂತೆ ಕಮಿಷನ್ ದಂಧೆಯ ಕುರಿತು ಲೋಕಾಯುಕ್ತ ಸ್ವಯಂ ದೂರು ದಾಖಲಿಸಿಕೊಂಡು ಈ ಕೂಡಲೇ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments