Webdunia - Bharat's app for daily news and videos

Install App

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

Krishnaveni K
ಶನಿವಾರ, 4 ಅಕ್ಟೋಬರ್ 2025 (21:00 IST)
ಬೆಂಗಳೂರು: ಜಾತಿಗಣತಿಗೆ ವಿಕಲಚೇತನರನ್ನೂ ಬಳಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಸಮೀಕ್ಷೆಗೆ ರಾಜ್ಯದ ವಿಶೇಷ ಚೇತನ ನೌಕರರನ್ನೂ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ,ಮಾನವೀಯ ಸ್ಪಂದನೆಯಿಲ್ಲದ ಸರ್ಕಾರದ ಧೋರಣೆಯನ್ನು ಇದು ಪ್ರತಿಬಿಂಬಿಸಿದೆ.

ವಿಶೇಷ ಚೇತನ ನೌಕರರನ್ನು ಸಮೀಕ್ಷೆ ಕಾರ್ಯದಿಂದ ಕೈ ಬಿಟ್ಟು ಸಮೀಕ್ಷೆ  ಸಂಬಂಧದ ಕಛೇರಿ ಕೆಲಸಗಳಿಗೆ ಬಳಸಿಕೊಳ್ಳಬಹುದಿತ್ತು, ಆದರೆ ವಿವೇಚನಾ ರಹಿತ ಆಡಳಿತ ವ್ಯವಸ್ಥೆಯಿಂದ ವಿಶೇಷ ಚೇತನ ನೌಕರರು ಸಂಕಷ್ಟಕ್ಕೆ ಸಿಲುಕಿರುವುದು ನಿಜಕ್ಕೂ ನೋವಿನ ಸಂಗತಿ, ಕಾಂಗ್ರೆಸ್ ಸರ್ಕಾರದ ಈ ನಡೆ ಖಂಡನೀಯ.

ಈ ಸಂಬಂಧ ಈಗಾಗಲೇ ಅಂಗವಿಕಲ ಸಂಘ, ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕೂಡಲೇ ಈ ರೀತಿಯ ಅಪ್ರಬುದ್ಧ ನಡೆಯಿಂದ ಹಿಂದೆ ಸರಿದು ವಿಶೇಷ ಚೇತನ ನೌಕರರನ್ನು ಗಣತಿ ಕಾರ್ಯದಿಂದ ಕೈ ಬಿಡಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನಮ್ಮ ಪಾದಯಾತ್ರೆಗೆ ಬೆಚ್ಚಿಬಿದ್ದು ಸಿಎಂ ವಿಶೇಷ ಅಧಿವೇಶನ ಕರೆದಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments