ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

Krishnaveni K
ಸೋಮವಾರ, 27 ಅಕ್ಟೋಬರ್ 2025 (15:28 IST)
ಬೆಂಗಳೂರು: ಬುಡಕಟ್ಟು ಜನರಿಗೆ ರಾಜ್ಯ ಸರ್ಕಾರ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದ್ದು ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ಏನಾದ್ರೂ ಆದ್ರೆ ಯಾರು ಹೊಣೆ ಎಂದಿದ್ದಾರೆ.

ರಾಜ್ಯ ಸರ್ಕಾರದ ನಿರ್ಲ್ಯಕ್ಷದ ಬಗ್ಗೆ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಬುಡಕಟ್ಟು ಸಮುದಾಯಗಳ ಜನರ ಜೀವನ ಸುಧಾರಿಸಲು ಪೌಷ್ಠಿಕ ಆಹಾರ ಒದಗಿಸುವ ಯೋಜನೆಯಲ್ಲಿ ಮುಗ್ಗಲು ಹಿಡಿದ ಬೆಳೆಗಳು, ಕಳಪೆ ಆಹಾರಗಳ ವಿತರಣೆಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಬುಡಕಟ್ಟು ಸಮುದಾಯದ ಕುಟುಂಬಗಳ ಕುರಿತು ಕಾಂಗ್ರೆಸ್ ಸರ್ಕಾರಕ್ಕಿರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸುತ್ತದೆ.

ರಾಜ್ಯದ ಸುಮಾರು 47,859 ಬುಡಕಟ್ಟು ಸಮುದಾಯಗಳ ಕುಟುಂಬಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡಲು ರಾಜ್ಯ ಸರ್ಕಾರ ವಾರ್ಷಿಕವಾಗಿ ₹120 ಕೋಟಿ ರೂ ವ್ಯಯಿಸುತ್ತಿದ್ದರೂ ಆದಿವಾಸಿ ಸುಮುದಾಯದ ಬಡವರಿಗೆ ಗುಣಮಟ್ಟದ ಆಹಾರ ಪೂರೈಕೆಯಾಗದಿರುವುದು ಸರ್ಕಾರದ ಆಡಳಿತ ಯಂತ್ರಕ್ಕೆ ತುಕ್ಕು ಹಿಡಿದಿರುವುದನ್ನು ಸಾಕ್ಷೀಕರಿಸುತ್ತದೆ.

ಕಳಪೆ ಆಹಾರಗಳ ಸೇವನೆಯಿಂದ ಅನಾರೋಗ್ಯ ಸಮಸ್ಯೆಗಳು ಉದ್ಭವಿಸಿದಲ್ಲಿ ಇದಕ್ಕೆ ಯಾರು ಹೊಣೆ? ದಪ್ಪ ಚರ್ಮದ ರಾಜ್ಯ ಸರ್ಕಾರ ಈ ಕೂಡಲೇ ಅಪೌಷ್ಟಿಕ ಆಹಾರ ತಲುಪಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಉತ್ತಮ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಮುಂಜಾಗ್ರತೆ ವಹಿಸಲಿ’ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

ಹೌದಪ್ಪಾ ಡಿಕೆಶಿ..ಕುಮಾರಣ್ಣನದ್ದು ಖಾಲಿ ಕೈ, ನೀವು ಲೂಟೇಶಿ: ಜೆಡಿಎಸ್ ಟೀಕೆ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments